Featured

ಸಮುದ್ರಗಳ‌ ಅಲೆಗಳಂತೆ ಉಕ್ಕಿ‌ಬಂದ ಜನಸಾಗರ, ಉಡುಪಿ‌ ಮೀನುಗಾರರ ಪ್ರತಿಭಟನೆ

ಉಡುಪಿ, ಜ.6: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಬೋಟ್ ಹಾಗೂ ಏಳು ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಮೀನುಗಾರರ ಬೃಹತ್ ಧರಣಿ ಮೆರವಣಿಗೆ ಇಂದು ಬೆಳಗ್ಗೆ ಮಲ್ಪೆಯಿಂದ ಆರಂಭಗೊಂಡಿದೆ.

ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್‌ನಿಂದ ಕರಾವಳಿ ಬೈಪಾಸ್ ವರೆಗೆ ನಡೆಯಲಿರುವ ಮೆರವಣಿಗೆಯಲ್ಲಿ ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಯ 15 ಸಾವಿರಕ್ಕೂ ಅಧಿಕ ಮೀನುಗಾರರು ಭಾಗವಹಿಸಿದ್ದಾರೆ. ಧರಣಿಯ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ.

ಮೆರವಣಿಗೆಯು ಅಂಬಲಪಾಡಿ ಜಂಕ್ಷನ್ ತಲುಪಿ, ಅಲ್ಲಿ ಧರಣಿನಿರತರು ರಸ್ತೆ ತಡೆ ನಡೆಸಲಿದ್ದಾರೆ. ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ.
ಈ ನಡುವೆ ಮೀನುಗಾರರ ಬೃಹತ್ ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯಿಂದ ಕಿನ್ನಿಮೂಲ್ಕಿಯ ವರೆಗೆ ಸುಮಾರು ನಾಲ್ಕು ಕಿ.ಮೀ. ರಸ್ತೆ ಸಂಚಾರವನ್ನು ಪೊಲೀಸರು ಸ್ಥಗಿತಗೊಳಿಸಿದ್ದಾರೆ.

ಶರಬತ್, ನೀರು ಪೂರೈಕೆ
ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಆದಿಉಡುಪಿಯ ಮಸೀದಿಯ ವತಿಯಿಂದ ಶರಬತ್ತು ವ್ಯವಸ್ಥೆ ಕಲ್ಪಿಸಲಾಗಿದೆ. ಅದೇರೀತಿ ಮಲ್ಪೆ ಮಸೀದಿಯ ವತಿಯಿಂದ ಮತ್ತು ಕಲ್ಮಾಡಿ ಚರ್ಚ್ ವತಿಯಿಂದ ಮೆರವಣಿಗೆಯಲ್ಲಿ ಸಾಗುವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖಂಡರಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಲಾಲಾಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ ಮತ್ತಿತರರು ಧರಣಿಗೆ ನೇತೃತ್ವ ವಹಿಸಿದ್ದಾರೆ.

https://m.facebook.com/story.php?story_fbid=1643445759134736&id=193132874519477

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago