ಉಡುಪಿ, ಜ.6: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಬೋಟ್ ಹಾಗೂ ಏಳು ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಮೀನುಗಾರರ ಬೃಹತ್ ಧರಣಿ ಮೆರವಣಿಗೆ ಇಂದು ಬೆಳಗ್ಗೆ ಮಲ್ಪೆಯಿಂದ ಆರಂಭಗೊಂಡಿದೆ.
ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್ನಿಂದ ಕರಾವಳಿ ಬೈಪಾಸ್ ವರೆಗೆ ನಡೆಯಲಿರುವ ಮೆರವಣಿಗೆಯಲ್ಲಿ ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಯ 15 ಸಾವಿರಕ್ಕೂ ಅಧಿಕ ಮೀನುಗಾರರು ಭಾಗವಹಿಸಿದ್ದಾರೆ. ಧರಣಿಯ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ಮೆರವಣಿಗೆಯು ಅಂಬಲಪಾಡಿ ಜಂಕ್ಷನ್ ತಲುಪಿ, ಅಲ್ಲಿ ಧರಣಿನಿರತರು ರಸ್ತೆ ತಡೆ ನಡೆಸಲಿದ್ದಾರೆ. ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ.
ಈ ನಡುವೆ ಮೀನುಗಾರರ ಬೃಹತ್ ಮೆರವಣಿಗೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಬಲಪಾಡಿಯಿಂದ ಕಿನ್ನಿಮೂಲ್ಕಿಯ ವರೆಗೆ ಸುಮಾರು ನಾಲ್ಕು ಕಿ.ಮೀ. ರಸ್ತೆ ಸಂಚಾರವನ್ನು ಪೊಲೀಸರು ಸ್ಥಗಿತಗೊಳಿಸಿದ್ದಾರೆ.
ಶರಬತ್, ನೀರು ಪೂರೈಕೆ
ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಆದಿಉಡುಪಿಯ ಮಸೀದಿಯ ವತಿಯಿಂದ ಶರಬತ್ತು ವ್ಯವಸ್ಥೆ ಕಲ್ಪಿಸಲಾಗಿದೆ. ಅದೇರೀತಿ ಮಲ್ಪೆ ಮಸೀದಿಯ ವತಿಯಿಂದ ಮತ್ತು ಕಲ್ಮಾಡಿ ಚರ್ಚ್ ವತಿಯಿಂದ ಮೆರವಣಿಗೆಯಲ್ಲಿ ಸಾಗುವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಸಿ. ಕುಂದರ್, ಮುಖಂಡರಾದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಲಾಲಾಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ ಮತ್ತಿತರರು ಧರಣಿಗೆ ನೇತೃತ್ವ ವಹಿಸಿದ್ದಾರೆ.
https://m.facebook.com/story.php?story_fbid=1643445759134736&id=193132874519477
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…