Featured

ಸಮುದ್ರದ ಅಲೆಗಳ ಅಬ್ಬರಕ್ಕೆ ಮಕ್ಕಳ  ಮುಂದೆಯೇ ಕೊಚ್ಚಿ ಹೋದ ತಾಯಿ ; ವಿಡಿಯೋ ವೈರಲ್‌ – Vishwanews24

ಸಮುದ್ರದ ಅಲೆಗಳ ಅಬ್ಬರಕ್ಕೆ ಮಕ್ಕಳ  ಮುಂದೆಯೇ ಕೊಚ್ಚಿ ಹೋದ ತಾಯಿ-ವಿಡಿಯೋ ವೈರಲ್‌

ಮುಂಬಯಿ: ತಾಯಿಯೊಬ್ಬಳು ಪುಟ್ಟ ಮಕ್ಕಳ ಕಣ್ಣು ಮುಂದೆಯೇ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಹೃದಯ ಹಿಂಡುವ ಘಟನೆ ಮುಂಬಯಿಯ ಬಾಂದ್ರಾದಲ್ಲಿರುವ ಬ್ಯಾಂಡ್‌ಸ್ಟ್ಯಾಂಡ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಜ್ಯೋತಿ ಸೋನಾರ್(32) ಮೃತ ಮಹಿಳೆ.

ಜ್ಯೋತಿ ಸೋನಾರ್ ಅವರು ಪತಿ ಹಾಗೂ ತನ್ನ ಮಕ್ಕಳೊಂದಿಗೆ ಪಿಕ್‌ ನಿಕ್‌ ಗೆಂದು ಜುಹು ಚೌಪಾಟಿಗೆ ಬಂದಿದ್ದರು. ಆದರೆ ಅಲೆಗಳ ಅಬ್ಬರ ಹೆಚ್ಚಾಗಿರುವ ಕಾರಣ ಜುಹು ಬೀಚ್‌ ಗೆ ಪ್ರವೇಶ ನಿಷೇಧಿಸಲಾಗಿತ್ತು. ಹೀಗಾಗಿ ಕುಟುಂಬ ಬಾಂದ್ರಾಕ್ಕೆ ಬಂದಿತ್ತು.

ಬಾಂದ್ರಾದಲ್ಲಿ ಸಮುದ್ರದ ಬಳಿ ಜ್ಯೋತಿ ತನ್ನ ಪತಿಯ ಜತೆ ಫೋಟೋ ತೆಗೆಸಿಕೊಳ್ಳಲು ಬಂಡೆಯ ಮೇಲೆ ಕೂತಿದ್ದಾರೆ. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸುತ್ತಿದ್ದರೂ ಫೋಟೋಗಾಗಿ ಜ್ಯೋತಿ ಗಂಡನನ್ನು ಹಿಡಿದುಕೊಂಡು ಕೂತಿದ್ದಾರೆ. ಮಕ್ಕಳ ಕೈಯಲ್ಲಿ ಮೊಬೈಲ್‌ ಕೊಟ್ಟು ಖುಷಿಯಿಂದ ಪೋಸ್‌ ಕೊಟ್ಟಿದ್ದಾರೆ. ಆದರೆ ರಭಸವಾಗಿ ಅಪ್ಪಳಿಸಿದ ಅಲೆಯೊಂದು ಜ್ಯೋತಿ ಅವರನ್ನು ಎಳೆದುಕೊಂಡೇ ಹೋಗಿದೆ. ಇದನ್ನು ನೋಡಿದ ಮಕ್ಕಳು “ಅಮ್ಮ ಅಮ್ಮ..” ಎಂದು ಕೂಗಲು ಶುರು ಮಾಡಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಸ್ಥಳೀಯ ನಿವಾಸಿ ಮುಕೇಶ್‌ ಎನ್ನುವರು ಜ್ಯೋತಿ ಅವರ ಸೀರೆಯನ್ನು ಹಿಡಿದು ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಮುಕೇಶ್‌ ಕೂಡ ಈ ಪ್ರಯತ್ನದಲ್ಲಿ ವಿಫಲವಾದಗ ಬೇರೆಯವರು ಮುಕೇಶ್‌ ಅವರ ಕಾಲನ್ನು ಎಳೆದು ಹೊರಕ್ಕೆ ಎಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಜ್ಯೋತಿ ಅವರ ಮೃತದೇಹವನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿ ತಿಳಿಸಿದೆ. ಇದೀಗ ಮೊಬೈಲ್‌ನಲ್ಲಿ ಸೆರೆಯಾದ ವಿಡಿಯೋ ವೈರಲ್‌ ಆಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago