ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ
ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.
ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ.
ಇದನ್ನೂ ಓದಿ:
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು – vishwanews24
ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ
