ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ.
ಉಳ್ಳಾಲದ ಕೈಕೋದಲ್ಲಿನ ಮನೆಯೊಂದಕ್ಕೆ ರಕ್ಕಸ ಅಲೆಯೊಂದು ಹೊಡೆದ ಕಾರಣ ಜನ ನೋಡು ನೋಡುತ್ತಿದ್ದಂತೆ ಮನೆ ಕುಸಿದು ಬಿದ್ದು ಸಮುದ್ರ ಪಾಲಾಗಿದೆ.
ಅಷ್ಟೇ ಅಲ್ಲದೇ ಸ್ಥಳೀಯ ಸುಮಾರು 15 ಮನೆಗಳಿಗೂ ಹಾನಿಯಾಗಿದೆ. 30ರಷ್ಟು ಮನೆಗಳಿಗೆ ಸಮುದ್ರದ ಅಲೆಗಳು ನುಗ್ಗಿದ್ದು, ಉಳ್ಳಾಲದ ಕಿಲಿರಿಯಾ, ಕೈಕೋ ಪ್ರದೇಶಗಳು ಅಪಾಯದ ಭೀತಿಯನ್ನು ಎದುರಿಸುತ್ತಿದೆ.
ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅಲ್ಲಿನ ಮಳೆ ನೀರು ನದಿಗೆ ಹರಿದು ಸಮುದ್ರ ಸೇರುತ್ತಿದೆ. ಜೊತೆಗೆ ಕಡಲ ತೀರದಲ್ಲಿ ಗಾಳಿ ಜೋರಾಗಿದ್ದರಿಂದ ಅಲೆಗಳ ಆರ್ಭಟವೂ ಹೆಚ್ಚಾಗಿದೆ. ಇದೀಗ ಕಡಲ ತೀರದ ನಿವಾಸಿಗಳು ಜೀವವನ್ನು ಕೈಯಲ್ಲಿ ಹಿಡಿದು ದಿನ ಸಾಗಿಸುತ್ತಿದ್ದಾರೆ.
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…