ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ.
ಉಳ್ಳಾಲದ ಕೈಕೋದಲ್ಲಿನ ಮನೆಯೊಂದಕ್ಕೆ ರಕ್ಕಸ ಅಲೆಯೊಂದು ಹೊಡೆದ ಕಾರಣ ಜನ ನೋಡು ನೋಡುತ್ತಿದ್ದಂತೆ ಮನೆ ಕುಸಿದು ಬಿದ್ದು ಸಮುದ್ರ ಪಾಲಾಗಿದೆ.
ಅಷ್ಟೇ ಅಲ್ಲದೇ ಸ್ಥಳೀಯ ಸುಮಾರು 15 ಮನೆಗಳಿಗೂ ಹಾನಿಯಾಗಿದೆ. 30ರಷ್ಟು ಮನೆಗಳಿಗೆ ಸಮುದ್ರದ ಅಲೆಗಳು ನುಗ್ಗಿದ್ದು, ಉಳ್ಳಾಲದ ಕಿಲಿರಿಯಾ, ಕೈಕೋ ಪ್ರದೇಶಗಳು ಅಪಾಯದ ಭೀತಿಯನ್ನು ಎದುರಿಸುತ್ತಿದೆ.
ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅಲ್ಲಿನ ಮಳೆ ನೀರು ನದಿಗೆ ಹರಿದು ಸಮುದ್ರ ಸೇರುತ್ತಿದೆ. ಜೊತೆಗೆ ಕಡಲ ತೀರದಲ್ಲಿ ಗಾಳಿ ಜೋರಾಗಿದ್ದರಿಂದ ಅಲೆಗಳ ಆರ್ಭಟವೂ ಹೆಚ್ಚಾಗಿದೆ. ಇದೀಗ ಕಡಲ ತೀರದ ನಿವಾಸಿಗಳು ಜೀವವನ್ನು ಕೈಯಲ್ಲಿ ಹಿಡಿದು ದಿನ ಸಾಗಿಸುತ್ತಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…