ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸಮುದ್ರ ರಾಜನ ರೌದ್ರಾವತಾರಕ್ಕೆ ಮನೆಯೊಂದು ಕೊಚ್ಚಿ ಹೋಗಿದೆ.
ಉಳ್ಳಾಲದ ಕೈಕೋದಲ್ಲಿನ ಮನೆಯೊಂದಕ್ಕೆ ರಕ್ಕಸ ಅಲೆಯೊಂದು ಹೊಡೆದ ಕಾರಣ ಜನ ನೋಡು ನೋಡುತ್ತಿದ್ದಂತೆ ಮನೆ ಕುಸಿದು ಬಿದ್ದು ಸಮುದ್ರ ಪಾಲಾಗಿದೆ.
ಅಷ್ಟೇ ಅಲ್ಲದೇ ಸ್ಥಳೀಯ ಸುಮಾರು 15 ಮನೆಗಳಿಗೂ ಹಾನಿಯಾಗಿದೆ. 30ರಷ್ಟು ಮನೆಗಳಿಗೆ ಸಮುದ್ರದ ಅಲೆಗಳು ನುಗ್ಗಿದ್ದು, ಉಳ್ಳಾಲದ ಕಿಲಿರಿಯಾ, ಕೈಕೋ ಪ್ರದೇಶಗಳು ಅಪಾಯದ ಭೀತಿಯನ್ನು ಎದುರಿಸುತ್ತಿದೆ.
ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅಲ್ಲಿನ ಮಳೆ ನೀರು ನದಿಗೆ ಹರಿದು ಸಮುದ್ರ ಸೇರುತ್ತಿದೆ. ಜೊತೆಗೆ ಕಡಲ ತೀರದಲ್ಲಿ ಗಾಳಿ ಜೋರಾಗಿದ್ದರಿಂದ ಅಲೆಗಳ ಆರ್ಭಟವೂ ಹೆಚ್ಚಾಗಿದೆ. ಇದೀಗ ಕಡಲ ತೀರದ ನಿವಾಸಿಗಳು ಜೀವವನ್ನು ಕೈಯಲ್ಲಿ ಹಿಡಿದು ದಿನ ಸಾಗಿಸುತ್ತಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…