ಸಮುದ್ರ ಮಂಥನದ ಕಾಲದಲ್ಲಿ ಕ್ಷೀರ ಸಾಗರದಲ್ಲಿ ಹುಟ್ಟಿ ಬಂದ ೫ ವೃಕ್ಷಗಳ ಪೈಕಿ ಪಾರಿಜಾತವೂ ಒಂದು : ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ..-Vishwanews24

ಸಮುದ್ರ ಮಂಥನದ ಕಾಲದಲ್ಲಿ ಕ್ಷೀರ ಸಾಗರದಲ್ಲಿ ಹುಟ್ಟಿ ಬಂದ ೫ ವೃಕ್ಷಗಳ ಪೈಕಿ ಪಾರಿಜಾತವೂ ಒಂದು ..

ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ..

ಪಾರಿಜಾತದ ಹೂವು ದೇವರ ಪೂಜೆಗೆ  ಬಹಳ ಶ್ರೇಷ್ಠವಾದ ಹೂವು. ದೇವಾಸುರರ ‘ಸಮುದ್ರ ಮಂಥನ’ದ ಕಾಲದಲ್ಲಿ ಕ್ಷೀರ ಸಮುದ್ರದಿಂದ ಉದಿಸಿದ ಹದಿನಾಲ್ಕು ರತ್ನಗಳಲ್ಲಿ ಐದು ಕಲ್ಪವೃಕ್ಷಗಳು ಹುಟ್ಟಿದವೆಂದು ಪ್ರತೀತಿ ಇದೆ. ಅವುಗಳೆಂದರೆ ಪಾರಿಜಾತ,  ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳಾಗಿವೆ. ಪಾರಿಜಾತ ಹೂವನ್ನು ತಿಳುವಳಿಕೆ ಹಾಗೂ ಜ್ಞಾನದ ಸಂಕೇತ ಎನ್ನುತ್ತಾರೆ. ಈ ಹೂವಿನ ಕಂಪು ಮೂಗಿಗೆ ತುಂಬಾ ಹಿತ, ಈ ಹೂ ಸೂರ್ಯ ಮುಳುಗಿದ ನಂತರ ಅರಳುವುದರಿಂದ ಇದನ್ನು ನೈಟ್ ಜಾಸ್ಮಿನ್‌ ಎಂದು ಕೂಡ ಕರೆಯಲಾಗುವುದು. ಇದನ್ನು ದೇವ ಪುಷ್ಮ ಎಂದು ಕರೆಯಲಾಗುವುದು.

ಸುರಭಿ ಮತ್ತು ವಾರುಣಿಯ ನಂತರ ಜನಿಸಿದ ಪಾರಿಜಾತವನ್ನು ದೇವತೆಗಳು ದೇವೇಂದ್ರನಿಗೆ ಕೊಟ್ಟರು. ಕೃಷ್ಣಾವತಾರದ ಕಾಲದಲ್ಲಿ ಕೃಷ್ಣನು ದೇವಲೋಕದಿಂದ ಪಾರಿಜಾತ ಗಿಡವನ್ನು ತಂದು ಸತ್ಯಭಾಮೆಯ ಅಂಗಳದಲ್ಲಿ ನೆಡುತ್ತಾನೆ. ಅದರ ಹೂವುಗಳು ರುಕ್ಮಿಣಿಯ ಅಂಗಳಕ್ಕೆ ಬೀಳುತ್ತಿದ್ದು, ಈ ಪ್ರಸಂಗದಲ್ಲಿ ಸತ್ಯಭಾಮೆಯಲ್ಲಿನ ಅಹಂಕಾರ ನಿರ್ಮೂಲವಾಯಿತು ಎನ್ನವುದು ಪುರಾಣದ ಸ್ವಾರಸ್ಯಕರ ಕಥೆ.

ಇನ್ನೊಂದು ಕಥೆಯ ಪ್ರಕಾರ ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನನ್ನು ಪ್ರೀತಿಸುತ್ತಿದ್ದಳು. ಸೂರ್ಯ ಅವಳನ್ನು ತೊರೆದಾಗ ವಿರಹದಿಂದ ಅಗ್ನಿಗೆ ಆತ್ಮಾರ್ಪಣೆ ಮಾಡಿಕೊಂಡ ಪಾರಿಜಾತಕಳ ಬೂದಿಯಿಂದ ಪಾರಿಜಾತ ಗಿಡವು ಹುಟ್ಟಿತು. ಅವಳು ಬತ್ತದ ತನ್ನ ಪ್ರೀತಿಯ ಧಾರೆಯ ಅಮೃತ ಸಿಂಚನವನ್ನು ಬೆಳಗಿನ ಸೂರ್ಯನಿಗೆ ಸಮರ್ಪಿಸುತ್ತಾಳೆ. ಸೂರ್ಯನು ಅಸ್ತಮಿಸಿದ ನಂತರ ಅರಳಿ ಸೂರ್ಯ ಬರುವ ಮೊದಲೇ ಉದುರುವ ಇದು ಸೂರ್ಯನನ್ನು ಇನ್ನೆಂದಿಗೂ ನೋಡ ಲಾರೆನೆಂಬ ಪ್ರತಿಜ್ಞೆಯನ್ನು ಇಂದಿಗೂ ಪಾಲಿಸುತ್ತಿದೆ ಎನ್ನುತ್ತಾರೆ. ಸೂರ್ಯನ ಪ್ರಖರ ಕಿರಣ ತಾಳಲಾರದೇ ಉದುರುವ ಈ ಕೋಮಲ ಹೂವಿನ ನೋವಿನ ಕಥೆಯ ಈ ಮರಕ್ಕೆ ಸೊರಗಿದ ಮರವೆಂತಲೂ ಹೆಸರಿದೆ.

ಪಾರಿಜಾತದಲ್ಲಿ ಸಾಮಾನ್ಯವಾಗಿ ಎರಡು ಬಗೆ ಕಂಡು ಬರುತ್ತದೆ. ಆರು ದಳಗಳು ಬಿಡಿಬಿಡಿ ಇದ್ದು ಹಿಂದಕ್ಕೆ ಮುದುರಿದಂತಿರುವುದು ಒಂದು ಬಗೆಯಾದರೆ, ಇನ್ನೊಂದು ದಳ ಅಗಲವಿದ್ದು ಒಂದಕ್ಕೊಂದು ಸೇರಿದಂತಿರುತ್ತದೆ. ಎಲೆಗಳ ಆಕಾರದಲ್ಲೂ ವ್ಯತ್ಯಾಸವಿದೆ ಸುವಾಸನೆ ಸೂಸುವ ಈ ಸುಂದರ ಹೂವು ಕೆಂಪು ತೊಟ್ಟು, ಬಿಳಿಯ ಮೃದುವಾದ ಎಸಳುಗಳನ್ನು ಹೊಂದಿ ಮುಟ್ಟಿದರೆ ಬಾಡುವುದೇನೋ ಎಂಬಷ್ಟು ಕೋಮಲತೆ ಹೊಂದಿದೆ.

ಬೀಜದಿಂದಲೂ ಸಸ್ಯಾಭಿವೃದ್ಧಿಯಾಗುವ ಇದನ್ನು ಮಳೆಗಾಲದಲ್ಲಿ ಗೆಲ್ಲುಗಳನ್ನು ನೆಟ್ಟು ಸಸ್ಯಾಭಿವೃದ್ಧಿ ಮಾಡಬಹುದು. ಹತ್ತರಿಂದ ಹದಿನೈದು ಅಡಿವರೆಗೆ ಬೆಳೆಯಬಲ್ಲ ಇದು ದೊಡ್ಡ ಗಿಡವಾದಷ್ಟೂ ಹೆಚ್ಚು ಹೂವು ಸುರಿಸುತ್ತದೆ. ನಿಕಾಂಥಿಸ್ ಅರ್ಬಸ್ಟ್ರಿಸ್ಟಿಸ್ ಎಂಬ ಇದರ ವೈಜ್ಞಾನಿಕ ಹೆಸರು, ‘ರಾತ್ರಿ ವೇಳೆ ಹೂವರಳಿಸುವ ದುಃಖತಪ್ತ ಮರ’ ಎಂಬ ಅರ್ಥವನ್ನು ಸೂಚಿಸುತ್ತದೆ. ಸಂಸ್ಕೃತದಲ್ಲಿ ಶೆಫಾಲಿಕಾ, ಬೆಂಗಾಲಿಯಲ್ಲಿ ಹರ್‌­ಸಿಂಗಾರ್, ಮಲಯಾಳದಲ್ಲಿ ಪವಿಳ ಮಲ್ಲಿಗೆ, ತಮಿಳಿನಲ್ಲಿ ಮಂಜು ಹೂವು ಎನ್ನುವರು.

ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ

ಸುಶ್ರುತ ಸಂಹಿತೆಯಲ್ಲಿ ಇದರ ಔಷಧಿಯ ಗುಣದ ಬಗ್ಗೆ ಹೇಳಲಾಗಿದ್ದು, ತೊಗಟೆಯ ಕಷಾಯದಿಂದ ಗಾಯಗಳನ್ನು ತೊಳೆದರೆ ಪರಿಣಾಮಕಾರಿ,

ಪಾರಿಜಾತ ಹಾಗೂ ತುಳಸಿಯ ಎಲೆಯ ಕಷಾಯ ಕೆಮ್ಮು ನೆಗಡಿಗೆ ಉಪಕಾರಿ.

ಹೂವನ್ನು ಅರೆದು ಮುಖಕ್ಕೆ ಪ್ಯಾಕ್ ಹಾಕಿ ಅರ್ಧ ಗಂಟೆಯ ನಂತರ ತೊಳೆದರೆ ಮುಖ ಕೋಮಲ ಹಾಗೂ ಕಾಂತಿಯುತವಾಗುತ್ತದೆ.

ತಲೆಯಲ್ಲಾಗುವ ಗಾಯಗಳಿಗೆ ಪಾರಿಜಾತದ ಎಲೆ ದಾಸವಾಳದ ಎಲೆಯನ್ನು ಅರೆದು ಪ್ಯಾಕ್ ಹಾಕಿ ಒಂದೆರಡು ಗಂಟೆ ಬಿಟ್ಟು ತೊಳೆಯಬೇಕು.

ಸಂಧಿವಾತ ನಿವಾರಣೆ ಮಾಡುವ ಪಾರಿಜಾತ ವಿಪರೀತ ಕಾಡುವ ಕೀಲುನೋವು ಶಮನ ಮಾಡುವ ಗುಣ ಪಾರಿಜಾತ ಗಿಡಕ್ಕಿದೆ, ಇದರ ಎಲೆಗಳಿಂದ ಮಾಡುವ ಕಷಾಯ ಸಂಧಿವಾತ ನೋವು ಕಡಿಮೆಯಾಗುವುದು. ಪ್ರತಿದಿನ ಮುಂಜಾನೆ ಪಾರಿಜಾತದ ಎಲೆಗಳ ಕಷಾಯ ಕುಡಿಯುತ್ತಿದ್ದರೆ ಸಂಧಿವಾತ ನಿಯಂತ್ರಣಕ್ಕೆ ಬರುತ್ತದೆ. ಪಾರಿಜಾತ ಎಲೆಯನ್ನು ಜಜ್ಜಿ ಅದನ್ನು ತೆಂಗಿನೆಣ್ಣೆಯಲ್ಲಿ ಕುದಿಸಿ ಅದನ್ನು ಹಚ್ಚುವುದರಿಂದಲೂ ನೋವು ಕಡಿಮೆಯಾಗುವುದು.

ಕೆಮ್ಮು, ಜಂತು ಹುಳ ನಿವಾರಣೆ ಪಾರಿಜಾತ ಗಿಡದ ಎಲೆಯಿಂದ ಮಾಡಿದ ಕಷಾಯ ಕೆಮ್ಮು ಹಾಗೂ ಜಂತುಹುಳ ನಿವಾರಣೆಗೆ ಬಳಸುತ್ತಾರೆ. ಮಕ್ಕಳಿಗೆ ಇದರ ಎಲೆಯ ಔಷಧ ಮಾಡಿ ನೀಡಲಾಗುವುದು. ಮಲಬದ್ಧತೆ ಸಮಸ್ಯೆ ನಿವಾರಣೆ ಮಾಡುವಲ್ಲಿಯೂ ಪಾರಿಜಾತ ಎಲೆಯ ಕಷಾಯ ಪರಿಣಾಮಕಾರಿಯಾಗಿದೆ.

ಹತ್ತು ಪಾರಿಜಾತ ಎಲೆಯನ್ನು ಒಂದು ಕಪ್ ನೀರಿಗೆ ಹಾಕಿ ಅದು ಅರ್ಧ ಕಪ್ ಆಗುವಷ್ಟು ಹೊತ್ತು ಕುದಿಸಿ, ಅದಕ್ಕೆ ಶುಂಠಿ ರಸ ಹಾಗೂ ಜೇನು ಸೇರಿಸಿ ಕುಡಿಯಿರಿ. ಇದನ್ನು ಮೂರು ಹೊತ್ತು ಕುಡಿಯುತ್ತಿದ್ದರೆ ಬೇಗನೆ ಕೆಮ್ಮು ಕಡಿಮೆಯಾಗುವುದು.

ಅಲ್ಲದೆ ಇದರ ಎಲೆಗಳನ್ನು ಕುದಿಸಿ ಕುಡಿಯುವುದರಿಮದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.

ಪಾರಿಜಾತ ಬೀಜ ಪಾರಿಜಾತ ಬೀಜವನನ್ನು ಸಂಗ್ರಹಿಸಿ ಪುಡಿ ಮಾಡಿ ಇದನ್ನು ಔಷಧಿಯಾಗಿ ಕಾಮಲೆ ರೋಗ ನಿವಾರಣೆಗೆ ಕೂಡ ಬಳಸಲಾಗುವುದು.

ಸೌಂದರ್ಯ ಉತ್ಪನ್ನ ಪಾರಿಜಾತ ಬೀಜದ ಪುಡಿಯನ್ನು ಪೌಡರ್ ಮಾಡಿ ಇದನ್ನು ಮುಖದ ಸೌಂದರ್ಯ ವೃದ್ದಿಸಲು ಬಳಸಬಹುದು.

ಹೂವು ಸುಗಂಧ ದ್ರವ್ಯ ತಯಾರಿಕೆಯಲ್ಲಿ ಉಪಯೋಗವಾಗುತ್ತದೆ. ಹಿತವಾದ ಇದರ ಕಂಪು ತೀಕ್ಷ್ಣತೆ ಇಲ್ಲದ ಇದರ ಸುಗಂಧ ತಲೆನೋವನ್ನು ಹೋಗಲಾಡಿಸುತ್ತದೆ. ಹೂವು ಮನೆಯೊಳಗಿದ್ದರೆ ಜೇನಿನಂಥ ಪರಿಮಳದ ಅನುಭವವಾಗುತ್ತದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago