Featured

ಸಮ್ಮಿಶ್ರ ಸರಕಾರದ ವಿರುದ್ಧ ಹೋರಾಟಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ ರಣಕಹಳೆ ಹೊರಡಿಸಿದ ಬಿಜೆಪಿ

ಬೆಂಗಳೂರು : ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿರುವ ಬಿಜೆಪಿ ರೈತರ ಸಾಲಮನ್ನಾ, ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿಚಾರಗಳು ಬಿಜೆಪಿಗೆ ವರದಾನವಾಗಿ ಪರಿಣಮಿಸಿದೆ. ಈ ವಿಷಯವನ್ನು ಇಟ್ಟುಕೊಂಡು ರಾಜ್ಯದ್ಯಾಂತ ಬಿಜೆಪಿ ಹೋರಾಟಕ್ಕೆ ಸಿದ್ದವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗೆಲ್ಲಲು ಇದು ಆಸರೆಯಾಗಲಿದೆ ಎಂಬ ಭರವಸೆಯನ್ನು ಕಮಲಪಾಳಯದ ನಾಯಕರು ಹೊಂದಿದ್ದಾರೆ.

ಈ ಎಲ್ಲಾ ವಿಷಯಗಳ ಕುರಿತು ಚರ್ಚೆ ನಡೆಸಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿಸಭೆ ನಡೆಸಿರುವ ನಾಯಕರು ಪಕ್ಷ ಸಂಘಟನೆ ಕುರಿತು ಹೆಚ್ಚಿನ ಒತ್ತು ನೀಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಜಿಂದಾಲ್​ನಲ್ಲಿ ಐದು ದಿನಗಳ ಪ್ರಾಕೃತಿಕ ಚಿಕಿತ್ಸೆಗೆ ದಾಖಲಾಗಿರುವ ಯಡಿಯೂರಪ್ಪ ಸಭೆಗೆ ಆಗಮಿಸಿದ್ದು , ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್​. ಅಶೋಕ್, ಸಿ.ಎಂ.‌ಉದಾಸಿ, ನಳೀನ್ ಕುಮಾರ್ ಕಟೀಲ್ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಿದ್ದಾರೆ.

ಲೋಕಸಭಾ ಚುನಾವಣೆ ತಯಾರಿಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಸೇರಿದಂತೆ ಪಕ್ಷ ಬಲವರ್ಧನೆಗೆ ಸಜ್ಜಾಗುವಂತೆ ಸೂಚನೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲಿ ಅಸಮಾಧಾನಿತ ಕಾಂಗ್ರೆಸ್ -ಜೆಡಿಎಸ್ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಸಿದ್ದು, ಮೈತ್ರಿ ಸರ್ಕಾರದ ವಿರುದ್ಧ ಹೊರಾಟದ ರೂಪುರೇಷೆ ಕುರಿತು ಚರ್ಚೆ ನಡೆಸಿದೆ.
ರೈತರ ಸಂಪೂರ್ಣ ಸಾಲ ಮನ್ನಾ ಆಗ್ರಹಿಸಿ ರಾಜ್ಯ ಪ್ರವಾಸ, ರಾಜ್ಯಾದ್ಯಂತ ಹೋರಾಟಕ್ಕೆ ತಯಾರಿ ನಡೆಸಿದ್ದು, ಇದರ ಸಾರಥ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೊರಲು ಮುಖಂಡರು ಸಮ್ಮತಿ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಗೆ ರೈತರ ಸಂಪೂರ್ಣ ಸಾಲ ಮನ್ನಾ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡು ರೈತರ ಪರವಾಗಿ ಹೋರಾಟದ ಮೂಲಕ ರೈತ ಸಮೂದಾಯ ಸೆಳೆಯಲು ಯೋಜನೆ ರೂಪಿಸಲಾಗಿದೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

5 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago