Featured

ಸಮ್ಮಿಶ್ರ ಸರಕಾರವನ್ನು ನಾವು ಬೀಳಿಸುವುದಿಲ್ಲ, ಅದಾಗಿಯೇ ಬೀಳಲಿದೆ: ಯಡಿಯೂರಪ್ಪ

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸೇರಿಕೊಂಡು ಸರಕಾರವನ್ನು ರಚನೆ ಮಾಡಿದ್ದು, ಸದ್ಯ ಈ ಎರಡು ಪಕ್ಷಗಳ ಪ್ರಮುಖರ ನಡುವೆ ಅಸಮಧಾನ ಹೊಗೆಯಾಡುತ್ತಿದೆ. ಇದೀಗ ಈ ಕುರಿತಾದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮ್ಮಿಶ್ರ ಸರಕಾರದಲ್ಲಿ ಅಸಮಧಾನಗಳು ಕಂಡುಬರುತ್ತಿವೆ. ಸಮ್ಮಿಶ್ರ ಸರಕಾರವನ್ನು ನಾವೇನೂ ಬೀಳಿಸಲು ಹೋಗುವುದಿಲ್ಲ. ಸರಕಾರವೇ ತನ್ನಿಂತಾನೇ ಬೀಳಲಿದೆ ಎಂದು ಭವಿಷ್ಯ ನುಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭೇಟಿ ಬೆನ್ನಲ್ಲೇ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಪಕ್ಷದ ಪ್ರಮುಖ ನಾಯಕರ ಜತೆ ಮಂಗಳವಾರ ಇಡೀ ದಿನ ಸುದೀರ್ಘ‌ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬಿಎಸ್‌ವೈ ಭೇಟಿ ಮಾಡಿದ ಮಾಜಿ ಸಚಿವ, ಶಾಸಕ ಉಮೇಶ್‌ ಕತ್ತಿ ಅವರು, ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ ಸುಮ್ಮನೆ ಕೂರುವುದಿಲ್ಲವೆಂಬ “ಬಾಂಬ್‌’ ಅನ್ನೂ ಸಿಡಿಸಿದರು. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಗೆ ನಾನೂ ಸೇರಿದಂತೆ ಬಸವರಾಜ ಬೊಮ್ಮಾಯಿ, ಮುರುಗೇಶ್‌ ನಿರಾಣಿ ಎಲ್ಲರೂ ಸಿದ್ಧರಿದ್ದೇವೆ ಎಂದೂ ಹೇಳಿರು ವುದು ಬಿಜೆಪಿ ಮತ್ತೂಮ್ಮೆ ಸರ್ಕಾರ ರಚನೆ ಅವಕಾಶಕ್ಕಾಗಿ ಕಾಯುತ್ತಿರುವ ಮುನ್ಸೂಚನೆ ನೀಡಿದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

5 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

6 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

6 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

7 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

7 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

7 hours ago