ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರನ್ನು ಹದ್ದು ಬಸ್ತಿನಲ್ಲಿ ಇಡದಿದ್ದರೇ, ನಾನು ಹಾಗೂ ಸತೀಶ್ ಜಾರಕಿಹೊಳಿ ಸೇರಿಕೊಂಡು ಉಗ್ರ ಕ್ರಮ ಕೈಗೊಳ್ಳುತ್ತೇವೆ ಎಂದು ಪೌರಾಡಳಿತ ಹಾಗೂ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಖಾರವಾಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2004 ರಿಂದ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯಕ್ಕೆ ಬಂದಿದ್ದಾರೆ. ಮೊದಲು ಅವರೇನಾಗಿದ್ದರು, ಅವರ ಇತಿಹಾಸ ಏನು ಎಂಬುದನ್ನು ಮೊದಲು ಅರಿತುಕೊಳ್ಳಲಿ. ಹೆಬ್ಬಾಳ್ಕರ್ ರವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದು ಸತೀಶ್ ಜಾರಕಿಹೊಳಿ. ನಾವು ಸಹಾಯ ಮಾಡಿದ್ದನ್ನು ಯಾರಿಗೂ ಹೇಳಬಾರದು ಎಂದು ಅಂದುಕೊಂಡಿದ್ದೆವು. ಆದರೆ ಈಗ ಅನಿವಾರ್ಯವಾಗಿ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಬ್ಬಾಳ್ಕರ್ ತಂದೆಯು ಅನಾರೋಗ್ಯಕ್ಕೆ ತುತ್ತಾದಾಗ ನಾನೇ ಧನ ಸಹಾಯ ಮಾಡಿದ್ದೆ, ಅವರ ಮಗ ಹಾಗೂ ಸಹೋದರನ ವಿಷಯದಲ್ಲೂ ಸಹಾಯ ಮಾಡಿದ್ದೆ. ಆದರೆ ಇಂದು ಅವರು ಕೀಳು ಮಟ್ಟಕ್ಕೆ ಇಳಿದು ಪ್ರಚಾರ ಮಾಡುತ್ತಿದ್ದಾರೆ. ಜಾರಕಿಹೊಳಿ ಕುಟುಂಬದ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಇನ್ನು ಮುಂದೆ ಹೆಬ್ಬಾಳ್ಕರ್ ಬಗ್ಗೆ ನಾವು ಮಾತನಾಡಲ್ಲ. ಹೆಬ್ಬಾಳ್ಕರ್ ನಮಗೆ ಸಾಲ ಕೊಟ್ಟಿದ್ದಾರೆ ಎಂಬುದು ಕೇವಲ ಊಹಾಪೋಹ. ಅವರಿಗೆ ದೆಹಲಿ ತೋರಿಸಿದ್ದು ನಾನು. ಡಿಕೆಶಿ ನಾವು ಇಬ್ಬರು ಗೆಳೆಯರು, 2004 ರಲ್ಲಿ ನಾವು ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ದೆವು. ಅವರೂ ಸಹ ನನಗೆ ಸಚಿವರಾಗಲು ಸಹಾಯ ಮಾಡಿದ್ದರು. ಕೊಲ್ಹಾಪುರದ ಮಹಾಲಕ್ಷ್ಮೀ ದೇವರ ಆಣೆ ಮಾಡಲೂ ಸಹ ನಾನು ಸಿದ್ದ. ಇನ್ನುಮುಂದೆ ಲಕ್ಷ್ಮೀ ಹೆಬ್ಬಾಳ್ಕರನ್ನು ಹದ್ದುಬಸ್ತಿನಲ್ಲಿ ಇಡದಿದ್ದರೇ, ನಾನು ಹಾಗೂ ಸತೀಶ್ ಜಾರಕಿಹೊಳಿ ಉಗ್ರ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಬಹುಮತ ಮಾಡೋದು ದೊಡ್ಡದಲ್ಲ. ಆದರೆ ಏನಾದರೂ ಮಾಡಿದರೆ ಜಾರಕಿಹೊಳಿ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.
ಚುನಾವಣಾ ವಿಚಾರದಲ್ಲಿ ಹಣಕಾಸಿನ ವ್ಯವಹಾರ ನಡೆದಿದೆ. ಸತೀಶ್ ಜಾರಕಿಹೊಳಿ ಅಪಮಾನ ಆದರೆ, ನಾನು ಅವರ ಜೊತೆಗೆ ಇರುತ್ತೇನೆ. ಅವರ ನಿರ್ಣಯಕ್ಕೆ ನಾನೂ ಬದ್ಧ. ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…