ಜೆಡಿಎಸ್ ಒಂದು ಸುಳ್ಳುಪಕ್ಷ ಹಾಗೂ ಬಿಜೆಪಿಯ ಅಂಗಪಕ್ಷವಾಗಿದೆ: ಇಕ್ಬಾಲ್ ಅನ್ಸಾರಿ
ಕೊಪ್ಪಳ : ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಬಿರುಕು ಮೂಡಿದೆಯೇ ಎಂಬ ಅನುಮಾನ ಹುಟ್ಟಿಸುವ ಘಟನೆಯೊಂದು ನಡೆದಿದೆ. ಸಿಎಂ ಕುಮಾರಸ್ವಾಮಿ ಕಟ್ಟಾ ಬೆಂಬಲಿಗರು ಬಹಿರಂಗ ಸಭೆಯಲ್ಲಿ ಜೆಡಿಎಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಂಸದ, ಮಾಜಿ ಶಾಸಕರು ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿಯವರು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
‘ ಜೆಡಿಎಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಜೆಡಿಎಸ್ ಬಿಜೆಪಿ ಪಕ್ಷಗಳು ಯಾವತ್ತಿದ್ರೂ ಕಾಂಗ್ರೆಸ್ ನ ವಿರೋಧಿಗಳು ಅಂತೆ. ಗಂಗಾವತಿಯಲ್ಲಿ ಜೆಡಿಎಸ್ ಬಂದ್ರೆ ದುರಾಡಳಿತ ನಡೆಯುತ್ತೆ. ಬಿಜೆಪಿಯನ್ನು ಗೆಲ್ಲಿಸೋ ಸಲುವಾಗಿ ಜೆಡಿಎಸ್ ಹುಟ್ಟಿಕೊಂಡಿದೆ. ಬಿಜೆಪಿಗೆ ಖೋ ಕೊಟ್ಟು ಜೆಡಿಎಸ್ ಮನೆಯಲ್ಲಿ ಕೂಡುತ್ತೆ. ಈ ಕಾರಣಕ್ಕೆ ಕಾಂಗ್ರೆಸ್ ನ್ನು ತಾವೆಲ್ಲರು ಬೆಂಬಲಿಸಬೇಕು, ‘ ಜೆಡಿಎಸ್ ಒಂದು ಸುಳ್ಳು ಪಕ್ಷವಾಗಿದ್ದು, ಅದು ಬಿಜೆಪಿಯ ಅಂಗಪಕ್ಷವಾಗಿದೆ. ಇನ್ನು ಜೆಡಿಎಸ್ ಬಿಜೆಪಿಯನ್ನು ಗೆಲ್ಲಿಸಲೆಂದೇ ಉಂಟಾದ ಪಕ್ಷವೆಂದು ಇಕ್ಬಾಲ್ ಅನ್ಸಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗಂಗಾವತಿಯಲ್ಲಿರುವ ಜೆಡಿಎಸ್ ಬಿಜೆಪಿ ಪಕ್ಷದ ಅಂಗಪಕ್ಷ. ಚುನಾವಣೆ ಬಂದಾಗ ಮುಸ್ಲಿಂ ಮತ ಇದ್ದಲ್ಲಿ ಜೆಡಿಎಸ್ ಅಂತಾರೆ. ಹಿಂದುಗಳ ಮತ ಹೆಚ್ಚಿದ್ದಲ್ಲಿ ಬಿಜೆಪಿ ಅಂತಾರೆ. ಈ ಕಾರಣಕ್ಕೆ ಜೆಡಿಎಸ್ನ್ನು ನಂಬಬೇಡಿ. ಇಂತ ಪಕ್ಷಗಳು ಯಾತಕ್ಕಾಗಿ ಇದ್ದಾವೆ. ಒಂದು ಪಕ್ಷ ಇನ್ನೊಂದು ಪಕ್ಷವನ್ನು ಗೆಲ್ಲಿಸಲು ಇವೆ ಎಂದು ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.
‘ ಜೆಡಿಎಸ್ ಟಿಕೆಟ್ ಭಾರೀ ಸುಲಭ ಸಿಗುತ್ತೆ. ಅದೇನು ದೊಡ್ಡ ಮಾತು ಅಲ್ಲ. ಆದರೆ ಎಲೆಕ್ಷನ್ ಆಗಿದ ಮೇಲೆ ಪಕ್ಷಕ್ಕೆ ಬಾಗಿಲು ಹಾಕ್ತಾರೆ ಇದು ಜೆಡಿಎಸ್ ಚಾಳಿ. ಜೆಡಿಎಸ್ ಪಕ್ಷವನ್ನು ನಂಬಬೇಡಿ ‘ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ. ಅನ್ಸಾರಿ ಹಾಗೂ ಶಿವರಾಮೇ ಗೌಡರ ವಾಗ್ದಾಳಿಯಿಂದ ಜೆಡಿಎಸ್ ಗೆ ಇರುಸು-ಮುರುಸು ಉಂಟಾಗಿದೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…