ಜೆಡಿಎಸ್ ಒಂದು ಸುಳ್ಳುಪಕ್ಷ ಹಾಗೂ ಬಿಜೆಪಿಯ ಅಂಗಪಕ್ಷವಾಗಿದೆ: ಇಕ್ಬಾಲ್ ಅನ್ಸಾರಿ
ಕೊಪ್ಪಳ : ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಬಿರುಕು ಮೂಡಿದೆಯೇ ಎಂಬ ಅನುಮಾನ ಹುಟ್ಟಿಸುವ ಘಟನೆಯೊಂದು ನಡೆದಿದೆ. ಸಿಎಂ ಕುಮಾರಸ್ವಾಮಿ ಕಟ್ಟಾ ಬೆಂಬಲಿಗರು ಬಹಿರಂಗ ಸಭೆಯಲ್ಲಿ ಜೆಡಿಎಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಂಸದ, ಮಾಜಿ ಶಾಸಕರು ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿಯವರು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
‘ ಜೆಡಿಎಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ. ಜೆಡಿಎಸ್ ಬಿಜೆಪಿ ಪಕ್ಷಗಳು ಯಾವತ್ತಿದ್ರೂ ಕಾಂಗ್ರೆಸ್ ನ ವಿರೋಧಿಗಳು ಅಂತೆ. ಗಂಗಾವತಿಯಲ್ಲಿ ಜೆಡಿಎಸ್ ಬಂದ್ರೆ ದುರಾಡಳಿತ ನಡೆಯುತ್ತೆ. ಬಿಜೆಪಿಯನ್ನು ಗೆಲ್ಲಿಸೋ ಸಲುವಾಗಿ ಜೆಡಿಎಸ್ ಹುಟ್ಟಿಕೊಂಡಿದೆ. ಬಿಜೆಪಿಗೆ ಖೋ ಕೊಟ್ಟು ಜೆಡಿಎಸ್ ಮನೆಯಲ್ಲಿ ಕೂಡುತ್ತೆ. ಈ ಕಾರಣಕ್ಕೆ ಕಾಂಗ್ರೆಸ್ ನ್ನು ತಾವೆಲ್ಲರು ಬೆಂಬಲಿಸಬೇಕು, ‘ ಜೆಡಿಎಸ್ ಒಂದು ಸುಳ್ಳು ಪಕ್ಷವಾಗಿದ್ದು, ಅದು ಬಿಜೆಪಿಯ ಅಂಗಪಕ್ಷವಾಗಿದೆ. ಇನ್ನು ಜೆಡಿಎಸ್ ಬಿಜೆಪಿಯನ್ನು ಗೆಲ್ಲಿಸಲೆಂದೇ ಉಂಟಾದ ಪಕ್ಷವೆಂದು ಇಕ್ಬಾಲ್ ಅನ್ಸಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗಂಗಾವತಿಯಲ್ಲಿರುವ ಜೆಡಿಎಸ್ ಬಿಜೆಪಿ ಪಕ್ಷದ ಅಂಗಪಕ್ಷ. ಚುನಾವಣೆ ಬಂದಾಗ ಮುಸ್ಲಿಂ ಮತ ಇದ್ದಲ್ಲಿ ಜೆಡಿಎಸ್ ಅಂತಾರೆ. ಹಿಂದುಗಳ ಮತ ಹೆಚ್ಚಿದ್ದಲ್ಲಿ ಬಿಜೆಪಿ ಅಂತಾರೆ. ಈ ಕಾರಣಕ್ಕೆ ಜೆಡಿಎಸ್ನ್ನು ನಂಬಬೇಡಿ. ಇಂತ ಪಕ್ಷಗಳು ಯಾತಕ್ಕಾಗಿ ಇದ್ದಾವೆ. ಒಂದು ಪಕ್ಷ ಇನ್ನೊಂದು ಪಕ್ಷವನ್ನು ಗೆಲ್ಲಿಸಲು ಇವೆ ಎಂದು ಬಿಜೆಪಿ, ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.
‘ ಜೆಡಿಎಸ್ ಟಿಕೆಟ್ ಭಾರೀ ಸುಲಭ ಸಿಗುತ್ತೆ. ಅದೇನು ದೊಡ್ಡ ಮಾತು ಅಲ್ಲ. ಆದರೆ ಎಲೆಕ್ಷನ್ ಆಗಿದ ಮೇಲೆ ಪಕ್ಷಕ್ಕೆ ಬಾಗಿಲು ಹಾಕ್ತಾರೆ ಇದು ಜೆಡಿಎಸ್ ಚಾಳಿ. ಜೆಡಿಎಸ್ ಪಕ್ಷವನ್ನು ನಂಬಬೇಡಿ ‘ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ. ಅನ್ಸಾರಿ ಹಾಗೂ ಶಿವರಾಮೇ ಗೌಡರ ವಾಗ್ದಾಳಿಯಿಂದ ಜೆಡಿಎಸ್ ಗೆ ಇರುಸು-ಮುರುಸು ಉಂಟಾಗಿದೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…