ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆಗೊಳಿಸಿದ್ದಾರೆ.
ಜನವರಿ 28ರ ವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲಖಾತೆಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 150125 ಸಾಲಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರವು ನಾಲ್ಕು ಹಂತಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಸಿಎಂ ಸಾಲಮನ್ನಾ ಯೋಜನೆಗೆ ಅಗತ್ಯವಾದ ಸಂಪೂರ್ಣ ಹಣವನ್ನು ಈ ಸಲದ ಬಜೆಟ್ನಲ್ಲೇ ನಿಗದಿಮಾಡುವುದಾಗಿ ಭರವಸೆ ನೀಡಿದ್ದರು. ಈ ಮೂಲಕ ಒಂದೇ ಹಂತದಲ್ಲಿ ಸಾಲಮನ್ನಾ ಯೋಜನೆಯನ್ನು ಅನುಷ್ಠಾನಕ್ಕೆ ತರುವುದಾಗಿ ಅವರು ತಿಳಿಸಿದ್ದರು.
ಒಂದೇ ಕಂತಿನಲ್ಲಿ ರೈತರ ಸಾಲ ಮನ್ನಾ ಮಾಡುವುದರಿಂದ ಮಧ್ಯವರ್ತಿಗಳ ಹಾವಳಿ ಕೂಡ ತಪ್ಪಲಿದೆ. ಈ ಯೋಜನೆಯ ಸಂಪೂರ್ಣ ಫಲಾನುಭಾವಿಗಳು ರೈತರೇ ಆಗಬೇಕೆಂದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ರೈತರ ಖಾತೆಗೆ ನೇರವಾಗಿ ಜಮೆ ಆಗುವಂತಹ ವ್ಯವಸ್ಥೆಯನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಸಾಲ ಮನ್ನಾ ಯೋಜನೆ ನಿಧಾನಗೊಳ್ಳಲು ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…