ಮಂಗಳೂರು: ಸುರತ್ಕಲ್ನ ಎನ್ಐಟಿಕೆ ಟೋಲ್ ಗೇಟ್ ರದ್ದಾಗಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟೋಲ್ ಗೇಟ್ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ‘ಟೋಲ್ ಗೇಟ್ ರದ್ದು ಮಾಡುವ ಸರ್ಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24
ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ಧ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈ ಸಂದರ್ಭ ಕನಿಷ್ಠ ವಿಷಾಧವನ್ನಾದರು ವ್ಯಕ್ತಪಡಿಸಿ ಕ್ಷೆಮೆ ಕೇಳಬೇಕೆಂದು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…