Featured

ಸರಕಾರದ ಸುರತ್ಕಲ್ ಟೋಲ್ ಆದೇಶ -ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ : ಮುನೀರ್‌ ಕಾಟಿಪಳ್ಳ – Vishwanews24

ಸರಕಾರದ ಸುರತ್ಕಲ್ ಟೋಲ್ ಆದೇಶ – ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ

ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಕೆ

ಟೋಲ್ ಗೇಟ್ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ

ಮಂಗಳೂರು: ಸುರತ್ಕಲ್​​‌ನ ಎನ್​​ಐಟಿಕೆ ಟೋಲ್ ಗೇಟ್ ರದ್ದಾಗಿರುವ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟೋಲ್ ಗೇಟ್ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ‘ಟೋಲ್ ಗೇಟ್ ರದ್ದು ಮಾಡುವ ಸರ್ಕಾರದ ಆದೇಶ ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ಧ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈ ಸಂದರ್ಭ ಕನಿಷ್ಠ ವಿಷಾಧವನ್ನಾದರು ವ್ಯಕ್ತಪಡಿಸಿ ಕ್ಷೆಮೆ ಕೇಳಬೇಕೆಂದು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದರು.

ಮಂಗಳೂರು: ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆ – ನೇಮಕಾತಿಗೆ ಅರ್ಜಿ ಆಹ್ವಾನ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago