Featured

ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ `ಐಡಿ ಕಾರ್ಡ್’ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಬೆಂಗಳೂರುಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ ಐಡಿ ಕಾರ್ಡ್‌ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನಾನಾ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ಸರಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅಧಿಕಾರಿಗಳ ಹೆಸರು ಹಾಗೂ ಹುದ್ದೆಗಳ ಗುರುತು ಸಿಗದೆ ಪರದಾಡುವುದು ಸಾಮಾನ್ಯವಾಗಿದೆ. ಇದರಿಂದ, ನಿಗದಿತ ವೇಳೆಗೆ ಕೆಲಸ, ಕಾರ್ಯಗಳಾಗದೆ ಹಾಗೂ ಸಂಬಂಧಪಟ್ಟ ಅಧಿಕಾರಿ ಮತ್ತು ನೌಕರರನ್ನು ಭೇಟಿ ಮಾಡಲಾಗದೇ ಸಾರ್ವಜನಿಕರು ಬರಿಗೈಲಿ ವಾಪಸ್‌ ತೆರಳಿದ ಸಾಕಷ್ಟು ಉದಾಹರಣೆಗಳಿವೆ.

ಇಂತಹ ಅನಿಶ್ಚಿತತೆಯನ್ನು ತಪ್ಪಿಸುವ ಸಲುವಾಗಿ ಹಾಗೂ ಕೆಲಸ, ಕಾರ್ಯಗಳ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಆದೇಶಿಸಿದ್ದಾರೆ.

ಆದ್ದರಿಂದ, ಇನ್ನು ಮುಂದೆ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಯ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ನೀಡಲಾದ ಹೆಸರು, ಪದನಾಮ ಹಾಗೂ ಇಲಾಖೆಯ ವಿವರಗಳುಳ್ಳ ಐಡಿ ಕಾರ್ಡ್‌ ಅನ್ನು ತಪ್ಪದೇ ಧರಿಸಬೇಕು. ಒಂದು ವೇಳೆ ಗುರುತಿನ ಚೀಟಿಯನ್ನು ಧರಿಸದೇ ಇರುವ ಬಗ್ಗೆ ಸಾರ್ವಜನಿಕರು ಹಾಗೂ ಇತರೆ ಕಡೆಯಿಂದ ದೂರುಗಳು ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಚೇರಿಯ ಮೇಲಧಿಕಾರಿಗಳು ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago