ಬೆಂಗಳೂರು: ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ ಐಡಿ ಕಾರ್ಡ್ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇಂತಹ ಅನಿಶ್ಚಿತತೆಯನ್ನು ತಪ್ಪಿಸುವ ಸಲುವಾಗಿ ಹಾಗೂ ಕೆಲಸ, ಕಾರ್ಯಗಳ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಆದೇಶಿಸಿದ್ದಾರೆ.
ಆದ್ದರಿಂದ, ಇನ್ನು ಮುಂದೆ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಯ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ನೀಡಲಾದ ಹೆಸರು, ಪದನಾಮ ಹಾಗೂ ಇಲಾಖೆಯ ವಿವರಗಳುಳ್ಳ ಐಡಿ ಕಾರ್ಡ್ ಅನ್ನು ತಪ್ಪದೇ ಧರಿಸಬೇಕು. ಒಂದು ವೇಳೆ ಗುರುತಿನ ಚೀಟಿಯನ್ನು ಧರಿಸದೇ ಇರುವ ಬಗ್ಗೆ ಸಾರ್ವಜನಿಕರು ಹಾಗೂ ಇತರೆ ಕಡೆಯಿಂದ ದೂರುಗಳು ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಚೇರಿಯ ಮೇಲಧಿಕಾರಿಗಳು ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…