Featured

ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ `ಐಡಿ ಕಾರ್ಡ್’ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ -Vishwanews24

ಬೆಂಗಳೂರುಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗಳಲ್ಲಿ ಐಡಿ ಕಾರ್ಡ್‌ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನಾನಾ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ಸರಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅಧಿಕಾರಿಗಳ ಹೆಸರು ಹಾಗೂ ಹುದ್ದೆಗಳ ಗುರುತು ಸಿಗದೆ ಪರದಾಡುವುದು ಸಾಮಾನ್ಯವಾಗಿದೆ. ಇದರಿಂದ, ನಿಗದಿತ ವೇಳೆಗೆ ಕೆಲಸ, ಕಾರ್ಯಗಳಾಗದೆ ಹಾಗೂ ಸಂಬಂಧಪಟ್ಟ ಅಧಿಕಾರಿ ಮತ್ತು ನೌಕರರನ್ನು ಭೇಟಿ ಮಾಡಲಾಗದೇ ಸಾರ್ವಜನಿಕರು ಬರಿಗೈಲಿ ವಾಪಸ್‌ ತೆರಳಿದ ಸಾಕಷ್ಟು ಉದಾಹರಣೆಗಳಿವೆ.

ಇಂತಹ ಅನಿಶ್ಚಿತತೆಯನ್ನು ತಪ್ಪಿಸುವ ಸಲುವಾಗಿ ಹಾಗೂ ಕೆಲಸ, ಕಾರ್ಯಗಳ ನಿಮಿತ್ತ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಅಧಿಕಾರಿಗಳು ಮತ್ತು ನೌಕರರನ್ನು ಗುರುತಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಆದೇಶಿಸಿದ್ದಾರೆ.

ಆದ್ದರಿಂದ, ಇನ್ನು ಮುಂದೆ ಸರಕಾರಿ ಅಧಿಕಾರಿಗಳು ಮತ್ತು ನೌಕರರು ಕಚೇರಿಯ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ನೀಡಲಾದ ಹೆಸರು, ಪದನಾಮ ಹಾಗೂ ಇಲಾಖೆಯ ವಿವರಗಳುಳ್ಳ ಐಡಿ ಕಾರ್ಡ್‌ ಅನ್ನು ತಪ್ಪದೇ ಧರಿಸಬೇಕು. ಒಂದು ವೇಳೆ ಗುರುತಿನ ಚೀಟಿಯನ್ನು ಧರಿಸದೇ ಇರುವ ಬಗ್ಗೆ ಸಾರ್ವಜನಿಕರು ಹಾಗೂ ಇತರೆ ಕಡೆಯಿಂದ ದೂರುಗಳು ಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಚೇರಿಯ ಮೇಲಧಿಕಾರಿಗಳು ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago