ಬೆಂಗಳೂರು : ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿದ್ಯುತ್ ಬಿಲ್ ಬಾಕಿಯಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿರುವುದರಿಂದ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದರು. ಈ ವೇಳೆ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ. ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.
ಇದರೊಂದಿಗೆ ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60 ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದ ಅವರು, ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ. ವರ್ಗಾವಣೆ ದಂಧೆಯನ್ನು ವರ್ಷ ಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…