ಬೆಂಗಳೂರು : ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿದ್ಯುತ್ ಬಿಲ್ ಬಾಕಿಯಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿರುವುದರಿಂದ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದರು. ಈ ವೇಳೆ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ. ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.
ಇದರೊಂದಿಗೆ ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60 ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದ ಅವರು, ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ. ವರ್ಗಾವಣೆ ದಂಧೆಯನ್ನು ವರ್ಷ ಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…