ಬೆಂಗಳೂರು : ಸರಕಾರಿ ಕಚೇರಿಗಳಿಂದಲೇ ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಬಾಕಿಯಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಿದ್ಯುತ್ ಬಿಲ್ ಬಾಕಿಯಿಂದ ಸರಕಾರಕ್ಕೆ ಹೆಚ್ಚಿನ ಹೊರೆಯಾಗಿರುವುದರಿಂದ ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ ಎಂದರು. ಈ ವೇಳೆ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ನೀಡುವ ಬೆಳಕು ಯೋಜನೆ ಅಡಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಯೋಚಿಸಲಾಗಿದೆ ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ಎನ್ ಒ ಸಿ ಅಗತ್ಯವಿಲ್ಲ. ರಾಜ್ಯದ ಎಲ್ಲ ಡಿವಿಜನಲ್ ಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದ್ದು. ಟಿಸಿ ಸುಟ್ಟರೆ 24 ಗಂಟೆಯಲ್ಲಿ ದುರಸ್ತಿ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು ಸೂಚಿಸಲಾಗಿದೆ, ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.
ಇದರೊಂದಿಗೆ ಉತ್ತರ ಕರ್ನಾಕಟದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ 60 ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲು ತೀರ್ಮಾನ ಮಾಡಲಾಗುವುದು ಎಂದ ಅವರು, ಈಗಾಗಲೇ ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದ್ದು ಲೈನ್ ಮೆನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ. ವರ್ಗಾವಣೆ ದಂಧೆಯನ್ನು ವರ್ಷ ಪೂರ್ತಿ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…