Featured

ಸರಕಾರಿ ಪ್ರಥಮ ದರ್ಜೆ ಕಾಲೇಜು ನೂತನವಾಗಿ ಆರಂಭಿಸಿರುವ ಬಿಬಿಎ(ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಕೋರ್ಸು ಉದ್ಘಾಟನೆ.vishwanews24

ಕಾಪು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು 2020-21ನೇ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಆರಂಭಿಸಿರುವ ಬಿಬಿಎ(ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್) ಕೋರ್ಸು ಮತ್ತು ಕರ್ನಾಟಕ ಬ್ಯಾಂಕ್ ಕೇಂದ್ರ ಕಚೇರಿಯಿಂದ ಕೊಡಮಾಡಿದ ಸಿ.ಸಿಟಿವಿಯ ಉದ್ಘಾಟನ ಕಾರ್ಯಕ್ರಮ ಸೋಮವಾರ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪುವಿನ ಶಾಸಕ ಲಾಲಾಜಿ‌ ಆರ್ ಮೆಂಡನ್ ನೆರವೇರಿಸಿ ಮಾತನಾಡಿ” ಕಾಲೇಜು ಜೀವನ ಕೇಲವ ಮೋಜು ಆಗದೆ ಜೀವನದ ಗುರಿ ಮುಟ್ಟುವ ಮೆಟ್ಟಿಲಾಗಬೇಕು,ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಶಿಕ್ಷಣದಲ್ಲಿ ಹಿಂದೆ ಬೀಳಬಾರದೆಂಬ ಹಿತದೃಷ್ಟಿಯಿಂದ ಸರ್ಕಾರಕ್ಕೆ ಒತ್ತಡ ಹಾಕುವ ಮುಖಾಂತರ ಕಾಪು ಸರಕಾರಿ ಕಾಲೇಜಿಗೆ ಹೊಸಹೊಸ ಕೋರ್ಸು ಮತ್ತು ಅದಕ್ಕೆ ಬೇಕಾಗುವ ಕಟ್ಟಡ ಇತರ ವ್ಯವಸ್ಥೆ ತರುವ ಪ್ರಯತ್ನ ಮಾಡುತ್ತೇವೆ ಆದರೇ ಅದರ ಸದುಪಯೋಗಿಸಿಕೊಳ್ಳುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕು ಎಂದರು.
ವಿದ್ರಾರ್ಥಿಗಳಿಗೆ ಉಪನ್ಯಾಸಕರ ಕೊರತೆ ಆಗದ ರೀತಿಯಲ್ಲಿ ಶೈಕ್ಷಣಿಕ ಸೇವೆ ನೀಡುವ ಕೆಲಸ ಮಾಡುತ್ತೇವೆ ಆದರೇ ವಿದ್ಯಾರ್ಥಿಗಳು ಉತ್ತಮ‌ ಫಲಿತಾಂಶ ನೀಡುವ ಜವಬ್ದಾರಿ ಇರಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ ಕರ್ನಾಟಕ ಬ್ಯಾಂಕ್ ನ ಉಡುಪಿ ,ಪುರಸಭಾ ಸದಸ್ಯ ಉಸ್ಮಾನ್,ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ,ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಚಂದ್ರ ಮಲ್ಲಾರ್,ಹರಿಣಾಕ್ಷಿ,ಸಂದೀಪ್ ಶೆಟ್ಟಿ,ಲಕ್ಷ್ಮಿಕಾಂತ್ ಕಾಪು, ಉಪಸ್ಥಿತರಿದ್ದರು.

ಉಪನ್ಯಾಸಕಿ ರಜನಿ ಬಿಬಿಎ ಕೋರ್ಸುನ ಬಗ್ಗೆ ಪ್ರಸ್ತಾಪಿಸಿ,ಪ್ರಾಂಶುಪಾಲ ಡಾ|ಪ್ರೋ.ಅನಿಲ್ ಕುಮಾರ್ ಸ್ವಾಗತಿಸಿದರು, ಪ್ರೋ.ಲತಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ,ಉಪನ್ಯಾಸಕಿ ಡಾ.ಸುಚಿತ್ರಾ ವಂದಿಸಿದರು.

ಬ್ಯೂರೋ ರಿಪೋರ್ಟ್
ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago