ಸರಕಾರಿ ಬಸ್ ಸಂಸ್ಥೆಗಳ ಮುಷ್ಕರ ಹಿನ್ನಲೆ – ಹೆಚ್ಚು ಖಾಸಗಿ ಬಸ್ಸುಗಳು ರಸ್ತೆಗೆ ಇಳಿಸಲು ನಿರ್ಧಾರ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 32000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ ಎಂದು ಖಾಸಗಿ ಬಸ್ಸು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಧವಾರದಿಂದ ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರದ ಹಿನ್ನಲೆಯಲ್ಲಿ 8 ಸಾವಿರ ಬಸ್, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿವೆ. 4000 ಸ್ಟೇಟ್ ಕ್ಯಾರೇಜ್ ವಾಹನಗಳು ನಮ್ಮ ಬಳಿ ಇದ್ದು, ಜನ ಸೇವೆಗೆ ಎಲ್ಲಾ ವಾಹನ ರಸ್ತೆಗೆ ಇಳಿಯುತ್ತದೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ ಆದ್ದರಿಂದ ರಾಜ್ಯದಲ್ಲಿ 60-40 ಅನುಪಾತ ಜಾರಿಗೆ ತರುವುದರ ಮೂಲಕ ಖಾಸಗಿ ವಾಹನಗಳಿಗೆ ಸರಕಾರ ಪರವಾನಿಗೆ ಕೊಡಬೇಕು ಅಲ್ಲದೆ ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತರಬೇಕು ಈ ಮೂಲಕ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗ ಆಗಲಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…