ಸರಕಾರಿ ಬಸ್ ಸಂಸ್ಥೆಗಳ ಮುಷ್ಕರ ಹಿನ್ನಲೆ – ಹೆಚ್ಚು ಖಾಸಗಿ ಬಸ್ಸುಗಳು ರಸ್ತೆಗೆ ಇಳಿಸಲು ನಿರ್ಧಾರ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 32000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ ಎಂದು ಖಾಸಗಿ ಬಸ್ಸು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಉಡುಪಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಧವಾರದಿಂದ ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರದ ಹಿನ್ನಲೆಯಲ್ಲಿ 8 ಸಾವಿರ ಬಸ್, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿವೆ. 4000 ಸ್ಟೇಟ್ ಕ್ಯಾರೇಜ್ ವಾಹನಗಳು ನಮ್ಮ ಬಳಿ ಇದ್ದು, ಜನ ಸೇವೆಗೆ ಎಲ್ಲಾ ವಾಹನ ರಸ್ತೆಗೆ ಇಳಿಯುತ್ತದೆ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ ಆದ್ದರಿಂದ ರಾಜ್ಯದಲ್ಲಿ 60-40 ಅನುಪಾತ ಜಾರಿಗೆ ತರುವುದರ ಮೂಲಕ ಖಾಸಗಿ ವಾಹನಗಳಿಗೆ ಸರಕಾರ ಪರವಾನಿಗೆ ಕೊಡಬೇಕು ಅಲ್ಲದೆ ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತರಬೇಕು ಈ ಮೂಲಕ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗ ಆಗಲಿದೆ ಎಂದು ಅವರು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…