Featured

ಸರಕಾರ ನರಸತ್ತಂತಿದೆ ,ಅಧಿಕಾರಿಗಳು ನಿಧಾನಗತಿಯಲ್ಲಿದ್ದಾರೆ ಉಡುಪಿಯಲ್ಲಿ ಸಂಸದೆ ಶೋಬಾ ಕರಂದ್ಲಾಜೆ ಕಿಡಿ

ಉಡುಪಿ: ರಾಜ್ಯದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಷ್ಟೇ ಸೀಮಿತವಾಗಿರುವ ಸರಕಾರ ಸತ್ತಿದೆ, ಅಧಿಕಾರಿಗಳು ನಿಧಾನಗತಿಯಲ್ಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. 

ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ 10 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಾಲ ಕೂಡಲೇ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೈಯ್ಯಲ್ಲಿ ಎಲ್ಲಾ ಖಾತೆಗಳಿದ್ದು ಜೆಡಿಎಸ್, ಕಾಂಗ್ರೆಸ್ ಶಾಸಕರು 15ದಿನಗಳನ್ನು ರೆಸಾರ್ಟ್‍ನಲ್ಲಿ ಕಳೆದು ಈಗ ದಿಲ್ಲಿಯಲ್ಲಿ ಮಂತ್ರಿ ಸ್ಥಾನ, ಖಾತೆಗಾಗಿ ಬೀಡು ಬಿಟ್ಟಿದ್ದಾರೆ, ಲಾಬಿ ನಿರತರಾಗಿದ್ದಾರೆ ಎಂದವರು ಆರೋಪಿಸಿದ್ದಾರೆ. 
ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಕಾಲಿಕ ಮಳೆಗೆ ಸಾವಿರಾರು ಮನೆಗಳು, ಮರಗಳಿಗೆ ಹಾನಿಯಾಗಿದ್ದು ಮೆಸ್ಕಾಂ ಪ್ರಕಾರ 1,000 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂಬತ್ತು ಗಂಟೆಗಳಲ್ಲಿ 270 ಮಿ. ಮೀ. ಮಳೆ ಬಿದ್ದಿದೆ. ರಾಜ್ಯ ಸರಕಾರ ಮಳೆ, ನೆರೆಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಪರಿಹಾರ, ಮನೆ ಕಟ್ಟಲು ನೆರವು ನೀಡಬೇಕು. ತೋಟ, ವಾಹನ ಹಾನಿಗೂ ಸೂಕ್ತ ಪರಿಹಾರವನ್ನು ಅಧಿಕಾರಿಗಳ ಜತೆ ಚರ್ಚಿಸಿ ನೀಡಬೇಕು ಎಂದವರು ಒತ್ತಾಯಿಸಿದ್ದಾರೆ. 

ಜಾತ್ಯತೀತ ಜನತಾ ದಳ ಪ್ರಣಾಳಿಕೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್ ಸಾಲ ಮನ್ನಾ ಜತೆಗೆ ಧರ್ಮಸ್ಥಳದಲ್ಲಿ ಲೇವಾದೇವಿದಾರರಿಂದ ಪಡೆದ ಸಾಲವನ್ನೂ ಮನ್ನಾ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿದ್ದಾರೆ. ರೈತರ ಆತ್ಮಹತ್ಯೆ ಸರಕಾರದ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಆಡಳಿತ ಹಾಗೂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದವರು ಪಟ್ಟು ಹಿಡಿದಿದ್ದಾರೆ. 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

4 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

4 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

6 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

6 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

6 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

6 hours ago