Featured

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ -Vishwanews24

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ -Vishwanews24

ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಆಚರಣೆ ಹಾಗೂ ಜಂಬೂ ಸವಾರಿ ರೂಪುರೇಷೆ ಬಗ್ಗೆ ಇಂದು ಬೆಂಗಳೂರಿನಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಿತು. ಸಿಎಂ ಬಿಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಸೂರು ದಸರಾ ಆಚರಣೆ ಕುರಿತಾಗಿ ಹಲವಾರು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಮಾರಕ ಕೊರೋನಾ ವೈರಸ್​ ಹರಡುವ ಭೀತಿ ಇರುವುದರಿಂದ ಈ ಬಾರಿ ಮೈಸೂರು ದಸರಾ ಆಚರಣೆಯನ್ನು ಸರಳವಾಗಿಯೇ ಆಚರಿಸಲು ತೀರ್ಮಾನಿಸಲಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಟಿ. ರವಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.

ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ, ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಯುವ ದಸರಾ, ಮಹಿಳಾ ದಸರಾ, ಚಿಣ್ಣರ ದಸರಾ, ರೈತ ದಸರಾ, ಪಂಜಿನ ಕವಾಯಿತು ಸೇರಿದಂತೆ ಜನಸಂದಣಿ ಕಾರ್ಯಕ್ರಮಗಳು ಈ ಬಾರಿಯ ಮೈಸೂರು ದಸರಾದಲ್ಲಿ ಇರುವುದಿಲ್ಲ.

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೊನಾ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

7 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

8 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

8 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

11 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

11 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

11 hours ago