ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕೋವಿಡ್ ಮಧ್ಯೆ ಇದು ಸರ್ಕಾರಕ್ಕೆ ಅಗ್ನಿಪರೀಕ್ಷೆಯಾಗಿದ್ದು, ಸರ್ಕಾರ ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೋವಿಡ್ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದಿದ್ದಾರೆ.
ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು.
ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದರು.
ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದರು.
ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಎಚ್ ಡಿಕೆ ಸಲಹೆ ನೀಡಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…