Featured

ಸರ್ಕಾರಕ್ಕೆ ಡಿ”ಕೇಸ್‌’ ಕಂಟಕ ; ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್‌ನಿಂದ ನೋಟಿಸ್‌

ಬೆಂಗಳೂರು: ಪ್ರಭಾವಿ ಸಚಿವ, ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಸಲ್ಲಿಸಿರುವ ದೂರು ಹಾಗೂ ವಿಚಾರಣೆಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯವೇ ಸಚಿವರಿಗೆ ನೋಟಿಸ್‌ ನೀಡಿರುವುದು ಸಮ್ಮಿಶ್ರ ಸರ್ಕಾರಕ್ಕೆ ಆರಂಭಿಕ ಆತಂಕ ತಂದೊಡ್ಡಿದಂತಿದೆ.

ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಬಲ ಅಸ್ತ್ರ ಪ್ರಯೋಗಿಸಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬಂದರೂ, ಈ ಬೆಳವಣಿಗೆ ಸಮ್ಮಿಶ್ರ ಸರ್ಕಾರಕ್ಕೆ ಎದುರಾಗಿರುವ ಮೊದಲ ಕಂಟಕ ಎಂದೇ ವಿಶ್ಲೇಷಿಸಲಾಗುತ್ತಿದೆ.

ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣದಲ್ಲಿ ಸಮನ್ಸ್‌ ಜಾರಿಯಾಗುವುದು ಸಹಜ. ಜತೆಗೆ ಜಾಮೀನು ಕೂಡ ಪಡೆಯಲು ಅವಕಾಶವಿರುತ್ತದೆ. ಆದರೆ ಡಿ.ಕೆ.ಶಿವಕುಮಾರ್‌ ವಿರುದ್ಧದ ಐಟಿ ದಾಳಿ ಪ್ರಕರಣದಲ್ಲಿ ಕೇಳಿಬರುತ್ತಿರುವ ಮಾತುಗಳೇ ಬೇರೆ. ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ. ಹಾಗಾಗಿ ಪ್ರಕರಣ ಗಂಭೀರ ಹಂತಕ್ಕೆ ತಲುಪಿದರೆ ಮೈತ್ರಿ ಸರ್ಕಾರದ ನಡೆ ಏನಾಗಿರಬೇಕು ಎಂಬುದು ಸದ್ಯ ಕಾಂಗ್ರೆಸ್‌ ಮಾತ್ರವಲ್ಲದೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿರೂ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರನ್ನು ಪದ್ಮನಾಭ ನಗರದ ನಿವಾಸದಲ್ಲಿ ಬುಧವಾರ ಭೇಟಿಯಾಗಿ ವಿಸ್ತ್ರತ ಚರ್ಚೆ ನಡೆಸಿದರು. ಪ್ರಕರಣದ ಬೆಳವಣಿಗೆಗೆ ಸಂಬಂಧಿಸಿ ಸರ್ಕಾರದ ನಿಲುವೇನಿರಬೇಕು? ಸಮರ್ಥನೆ ನೀಡಬಹುದಾದ ಅಂಶಗಳು, ನಂತರದ ಬೆಳವಣಿಗೆಯನ್ನು ಹೇಗೆ ಎದುರಿಸಬೇಕು ಎಂಬುದು ಸೇರಿ ಇತರೆ ವಿಚಾರಗಳ ಬಗ್ಗೆ ಗಹನ ಚರ್ಚೆ ನಡೆಸಿದರು.

ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಐಟಿ ದೂರು ಸಲ್ಲಿಸಿರುವುದು ಮತ್ತು ನಂತರದ ಬೆಳವಣಿಗೆ ಜತೆಗೆ ಮುಂದೆ ಪ್ರಕರಣ ಪಡೆಯಬಹುದಾದ ತಿರುವುಗಳು ಹಾಗೂ ಕೇಂದ್ರ ಸರ್ಕಾರ ಹಂತ ಹಂತವಾಗಿ ಪ್ರಯೋಗಿಸುವ ಅಸ್ತ್ರಗಳೇನು ಎಂಬ ಭೀತಿ ಕಾಂಗ್ರೆಸ್‌ ಪಕ್ಷದ ನಿದ್ದೆಗೆಡಿಸಿದೆ. ಅಲ್ಲದೆ, ಇನ್ನಷ್ಟು ಕಾಂಗ್ರೆಸ್‌ ನಾಯಕರ ಮೇಲೆ ಐಟಿ ದಾಳಿ ನಡೆಯುವ ಸಾಧ್ಯತೆ ಬಗೆಗಿನ ಮಾತುಗಳು ಪಕ್ಷವನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ.

ನನ್ನ ಬಳಿಯೂ ಡೈರಿಗಳಿವೆ, ಸಮಯ ಬಂದಾಗ ಬಿಚ್ಚಿಡುತ್ತೇನೆ:

ನನ್ನ ಬಳಿಯೂ ಇಂತಹ ಹಲವು ಡೈರಿಗಳಿವೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ. ನನ್ನನ್ನೇ ಏಕೆ ಟಾರ್ಗೆಟ್ ಮಾಡ್ತಿದ್ದಾರೆ? ಬೇರೆಯವರ ಮನೇಲಿ ಡೈರಿ, ಲೆಕ್ಕ ಇಟ್ಟಿದ್ದು ಗೊತ್ತಿದ್ದರೂ ಅಂತವರ ಮೇಲೆ ಏಕೆ ದಾಳಿ ಇಲ್ಲ ಎಂದು ಸಚಿವ ಡಿ,ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ನಮಗೆ ಸಂಬಂಧಿಸಿದ ಡೈರಿ ಸಿಕ್ಕಿದೆ. ಅದರಲ್ಲಿ ಹಲವು ವಿಷಯಗಳನ್ನು ಬರೆಯಲಾಗಿದೆ ಎಂದೆಲ್ಲಾ ಮಾಧ್ಯಮಗಳಲ್ಲಿ ಉಲ್ಲೇಖೀಸಲಾಗುತ್ತಿದೆ. ನಾವೂ ಸಾಕಷ್ಟು ಡೈರಿಗಳನ್ನು ನೋಡಿದ್ದೇವೆ. ನಾವು ಯಾವುದೇ ತಪ್ಪು ಮಾಡದಿದ್ದರೂ ನನ್ನನ್ನೇ ಏಕೆ ಗುರಿ ಮಾಡುತ್ತಿದ್ದಾರೆ ಎಂಬುದೂ ಗೊತ್ತಿದೆ. ಅದಕ್ಕೆ ಈಗ ಪ್ರತಿಕ್ರಿಯಿಸುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇನೆ ಎಂದರು.

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ನ್ಯಾಯಾಲಯ ನೋಟಿಸ್ ನೀಡಿರುವುದು ರಾಜಕೀಯ ಕಲಹಕ್ಕೆ ಕಾರಣವಾಗಿದ್ದು, ಜೆಡಿಎಸ್ ಕಾಂಗ್ರೆಸ್ ಸಚಿವ ಶಿವಕುಮಾರ್ ಗೆ ಬೆನ್ನೆಲುಬಾಗಿ ನಿಂತಿದ್ದು ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಡಿಕೆ ಶಿವಕುಮಾರ್ ಬೆಂಬಲಕ್ಕೆ ಜೆಡಿಎಸ್ ನಿಂತಿದೆ. ಎಚ್ .ಡಿ ಕುಮಾರ ಸ್ವಾಮಿ ಅವರ ಸಂಪುಟ ಸಹೋದ್ಯೋಗಿಗಳನ್ನು  ಬಿಜೆಪಿ ಟಾರ್ಗೆಟ್ ಮಾಡಿದ್ದಾರೆ, ಕುಮಾರ ಸ್ವಾಮಿ ಸರ್ಕಾರದ ಸಚಿವರನ್ನು ಸಿಕ್ಕಿಹಾಕಿಸಿ ಬಿಜೆಪಿ ಆಟ ಆಡುತ್ತಿದೆ, ಇದೊಂದು ತಿರುಚಿದ ಪ್ರಕರಣವಾಗಿದ್ದು ನಾವೆಲ್ಲಾ ಶಿವಕುಮಾರ್ ಅವರ ಜೊತೆಗಿದ್ದೇವೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.
ಸದ್ಯ ಪ್ರಕರಣ ಕೋರ್ಟ್ ನಲ್ಲಿದ್ದು, ಗುಜರಾತ್ ರಾಜ್ಯಸಭಾ ಚುನಾವಣೆಯಿಂದ ಇಲ್ಲಿಯವರೆಗೆ ಬಿಜೆಪಿ ಶಿವಕುಮಾರ್ ಅವರನ್ನು ಹೇಗೆ ಟಾರ್ಗೆಟ್ ಮಾಡುತ್ತಿದೆ ಎಂಬುದನ್ನು ಇಡೀ ರಾಷ್ಚ್ರವೇ ನೋಡುತ್ತಿದೆ, ಜನರಿಗೆ ಎಲ್ಲೆ ಬೆಳವಣೆಗೆಗಳ ಬಗ್ಗೆ ಅರಿವಿದೆ ಎಂದು ಅವರು ತಿಳಿಸಿದ್ದಾರೆ.

ಇದು ಉದ್ದೇಶಪೂರ್ವಕ ಕಿರುಕುಳ
ತಮ್ಮ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವ ಡಿ.ಕೆ.ಶಿವಕುಮಾರ್‌, ಉದ್ದೇಶಪೂರ್ವಕವಾಗಿ ನನಗೆ ಕಿರುಕುಳ ನೀಡಲಾಗುತ್ತಿದೆ. ಇದನ್ನು ಎದುರಿಸುವ ಧೈರ್ಯ ನನಗಿದೆ. ನ್ಯಾಯಾಲಯದಲ್ಲಿ ಇರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಇಲ್ಲದಿದ್ದರೆ ನಾನೇನು ಎಂಬುದನ್ನು ತೋರಿಸುತ್ತಿವೆ. ಐಟಿ ಕೇಸ್‌ನಲ್ಲಿ ನನ್ನನ್ನು ದುರುದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಸಮನ್ಸ್‌ ಜಾರಿಯಾಗಿಲ್ಲ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಬಂದಿದೆ. ನನಗೆ ಮಾತ್ರವಲ್ಲ, ನನ್ನ ತಾಯಿ ಹಾಗೂ ಕುಟುಂಬ ಸದಸ್ಯರಿಗೂ ನೋಟಿಸ್‌ ಬಂದಿದೆ. ನ್ಯಾಯಾಲಯದ ಆದೇಶವನ್ನು ಗೌರವಿಸಿ ವಿಚಾರಣೆಗೆ ಹಾಜರಾಗುತ್ತೇವೆ ಎಂದು ಹೇಳಿದರು.

ಬಿಜೆಪಿಯವರು ತಮ್ಮ ರಾಜೀನಾಮೆ ಕೇಳಿದ ಬಗ್ಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಸ್ನೇಹಿತರು ನನ್ನ ರಾಜೀನಾಮೆ ಕೇಳುತ್ತಿದ್ದಾರಾ? ನಾವೂ ಕೂಡ ಅವರ ಪ್ರಕರಣಗಳ ದೊಡ್ಡ ಹೊರೆಯನ್ನೇ ಬಿಚ್ಚಿಡಬೇಕಾಗುತ್ತದೆ. ಕಾಲ ಕೂಡಿ ಬಂದಾಗ ಅದನ್ನೂ ಮಾಡುತ್ತೇನೆ ಎಂದು ಸವಾಲು ಹಾಕಿದರು.

ಕೇಂದ್ರ ಸರ್ಕಾರದ ಸಂಸ್ಥೆಗಳು ದ್ವೇಷ ಅಥವಾ ಒತ್ತಡಕ್ಕೆ ಮಣಿಯದೆ ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಸಚಿವ ಡಿ.ಕೆ.ಶಿವಕುಮಾರ್‌ ಅವರು ಕಾನೂನುಬದ್ಧವಾಗಿದ್ದರೆ ನಾವೆಲ್ಲರೂ ಅವರ ಬೆಂಬಲಕ್ಕೆ ನಿಲ್ಲುತ್ತೇವೆ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago