ಬೆಂಗಳೂರು, : ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣದ ನೆಪದಲ್ಲಿ ಸಾವಿರಾರು ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದು, ಸರ್ಕಾರದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವೆಂಬ ವೈರಸ್ ಗೆ ಲಸಿಕೆ ಎಲ್ಲಿದೆ ತರುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿ ಯಡಿಯೂರಪ್ಪನವರು ಇದಕ್ಕೆ ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ವೈರಸ್ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಬಿ.ಎಸ್. ಯಡಿಯೂರಪ್ಪ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?’ ಎಂದು ಕೇಳಿದರು.
ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24
ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ.ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ.
ಕೊರೊನಾ ವೈರಸ್ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
ಇದನ್ನೂ ಓದಿ : ಉಡುಪಿ : ಮಾರ್ಚ್ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]