Featured

ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ ,  ಹೀಗಾಗಿ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ : ರಾಹುಲ್ ಗಾಂಧಿ -Vishwanews24

ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ ,  ಹೀಗಾಗಿ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ : ರಾಹುಲ್ ಗಾಂಧಿ -Vishwanews24

ನವದೆಹಲಿ: ಶೋಷಣೆ ಮನೋಭಾವದ ಸರ್ಕಾರಕ್ಕೆ ಶಾಂತಿಯುತ ಸತ್ಯಾಗ್ರಹ ಇಷ್ಟವಾಗಿಲ್ಲ. ಹೀಗಾಗಿಯೇ ‘ಭಾರತ್ ಬಂದ್’ ಪ್ರತಿಭಟನೆಗೆ ಕರೆ ನೀಡಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ. ಪ್ರತಿಭಟನೆ ಬೆಂಬಲಿಸಿ ‘ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್’ ಹ್ಯಾಷ್ ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ.

Vishwa News 24

Recent Posts

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

27 seconds ago

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

9 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

23 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

53 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

58 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

1 hour ago