ಬಾಗಲಕೋಟೆ : ಬಿಜೆಪಿ ಹೈಕಮಾಂಡ್ ಮೂವರಿಗೆ ಡಿಸಿಎಂ ಪಟ್ಟ ನೀಡಿದಕ್ಕೆ ಈಗಾಗಲೇ ಪಕ್ಷದೊಳಗೆ ಅಸಮಾಧಾನ ವ್ಯಕ್ತವಾಗಿದ್ದು, ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಶೀಘ್ರದಲ್ಲಿ ಪತನವಾಗಲಿದೆ, ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಅಮಿತ್ ಶಾಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಇಷ್ಟವಿರಲಿಲ್ಲ, ಹೀಗಿದ್ದರು ಕಷ್ಟ ಪಟ್ಟು ಅಧಿಕಾರ ಪಡೆದುಕೊಂಡ ಬಿಎಸ್ ವೈ. ಇದರ ಬೆನ್ನಲ್ಲೇ ಮೂವರು ಸಚಿವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಿದ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದೆ ಎಂದರು.
ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ವೇಳೆಯಲ್ಲಿಯೂ ಹಲವು ಸಚಿವಾಕಾಂಕ್ಷಿಗಳಿಗೆ ಖಾತೆ ಕೈ ತಪ್ಪಿ ಹೋಗಿದ್ದು, ಹಲವರಲ್ಲಿ ಅಸಮಾಧಾನ ಮೂಡಿಸಿತ್ತು. ಅದಾದ ಬಳಿಕ ಈ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿದ್ದವರಿಗೆ ಸ್ಥಾನ ನೀಡದೆ ಕೈ ಕೊಟ್ಟಿದ್ದು, ಪಕ್ಷದೊಳಗೊಳಗೆ ಹಾಗೂ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿದೆ. ಹೀಗಾಗಿ ಖಂಡಿತ ಸದ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟವಾಗಲಿದೆ. ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ. ಈ ಎಲ್ಲಾ ಅಪರಾಧದಿಂದಲೇ ಸರ್ಕಾರ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…