Featured

ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ, ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ : ಸಿದ್ದರಾಮಯ್ಯ -Vishwanews24

ಬಾಗಲಕೋಟೆ : ಬಿಜೆಪಿ ಹೈಕಮಾಂಡ್ ಮೂವರಿಗೆ ಡಿಸಿಎಂ ಪಟ್ಟ ನೀಡಿದಕ್ಕೆ ಈಗಾಗಲೇ ಪಕ್ಷದೊಳಗೆ ಅಸಮಾಧಾನ ವ್ಯಕ್ತವಾಗಿದ್ದು, ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಶೀಘ್ರದಲ್ಲಿ ಪತನವಾಗಲಿದೆ,  ಬಿಜೆಪಿ ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್​ ಅಮಿತ್ ಶಾಗೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಇಷ್ಟವಿರಲಿಲ್ಲ, ಹೀಗಿದ್ದರು  ಕಷ್ಟ ಪಟ್ಟು ಅಧಿಕಾರ ಪಡೆದುಕೊಂಡ ಬಿಎಸ್ ವೈ. ಇದರ ಬೆನ್ನಲ್ಲೇ ಮೂವರು ಸಚಿವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಿದ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದೆ ಎಂದರು.

ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ವೇಳೆಯಲ್ಲಿಯೂ ಹಲವು ಸಚಿವಾಕಾಂಕ್ಷಿಗಳಿಗೆ ಖಾತೆ ಕೈ ತಪ್ಪಿ ಹೋಗಿದ್ದು, ಹಲವರಲ್ಲಿ ಅಸಮಾಧಾನ ಮೂಡಿಸಿತ್ತು. ಅದಾದ ಬಳಿಕ ಈ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿದ್ದವರಿಗೆ ಸ್ಥಾನ ನೀಡದೆ ಕೈ ಕೊಟ್ಟಿದ್ದು, ಪಕ್ಷದೊಳಗೊಳಗೆ  ಹಾಗೂ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿದೆ. ಹೀಗಾಗಿ ಖಂಡಿತ ಸದ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟವಾಗಲಿದೆ. ತಾನು ಮಾಡಿದ ತಪ್ಪಿಗೆ ತಕ್ಕ ಪಾಠ ಅನುಭವಿಸಲಿದೆ. ಈ ಎಲ್ಲಾ ಅಪರಾಧದಿಂದಲೇ ಸರ್ಕಾರ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

7 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago