ಬೆಂಗಳೂರು: ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿಷಯ ತಿಳಿಸಿದರು.
ಜುಲೈ 15ರಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಪದಾಧಿಕಾರಿಗಳ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಸಭೆಯಲ್ಲಿ ಭಾಗಿಯಾಗಿ ಮಾರ್ಗದರ್ಶನ ನೀಡಿದ್ದಾರೆ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ ಸುದ್ದಿಗೋಷ್ಟಿಯಲ್ಲಿದ್ದರು.
ಪದಾಧಿಕಾರಿಗಳ ಸಭೆಯಲ್ಲಿ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಯಾಯ್ತು. ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಬಿಜೆಪಿ ಸರ್ಕಾರ ಈ ವರ್ಗದ ಮೀಸಲಾತಿ ಹೆಚ್ಚು ಮಾಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ದಲಿತರ ಹೆಸರೇಳಿ ದಲಿತರ ಹೆಸರಲ್ಲಿ ಭ್ರಷ್ಟಾಚಾರ ಮಾಡಿದೆ. ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ, ಇಡೀ ಸಚಿವ ಸಂಪುಟ ದಲಿತರ ಹಣ ನುಂಗಲು ತಯಾರಿ ಮಡಿಕೊಂಡಿರೋದು ವಿಷಾದನೀಯ ಎಂದು ಸುನೀಲ್ ಕುಮಾರ್ ತಿಳಿಸಿದರು.
ಸರ್ಕಾರದ ಯೋಜನೆ ಮೂಲಕ, ದಲಿತ ಸಮುದಾಯದ ಏಳಿಗೆ ಮಾಡಬೇಕಿತ್ತು. ದಲಿತರಿಗೆ ಮೀಸಲಿಟ್ಟ ಹಣವನ್ನ ಲೂಟಿ ಮಾಡಿದೆ ಅಂತ ಬಿಜೆಪಿ ಒತ್ತಿ ಹೇಳಲಿದೆ. ವಾಲ್ಮೀಕಿ ಹಗರಣ, ಕಾರ್ಮಿಕರ ಇಲಾಖೆ ಹಗರಣ, SCP-TSP ಹಗರಣ ಹಗರಣಗಳ ಸರಮಾಲೆಯ ಸರ್ಕಾರ ಇದಾಗಿದೆ. ಇದನ್ನು ವಿರೋಧಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋ ಕರೆ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ದೊಡ್ಡ ಸಂಖ್ಯೆಯಲ್ಲಿ ಬರಲಿದೆ. ಸಿದ್ದರಾಮಯ್ಯ ಅವರ ನಿಲುವು ಖಂಡಿಸಿ ಮುತ್ತಿಗೆ ಹಾಕಲಿದೆ. ದಲಿತರ ಹಣ ಲೂಟಿ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ದಲಿತರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…