ಬೆಂಗಳೂರು: ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ವಿಷಯ ತಿಳಿಸಿದರು.
ಜುಲೈ 15ರಂದು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಭೆ ನಡೆಸಿ, ವಿಧಾನಸೌಧ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಪದಾಧಿಕಾರಿಗಳ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಸಭೆಯಲ್ಲಿ ಭಾಗಿಯಾಗಿ ಮಾರ್ಗದರ್ಶನ ನೀಡಿದ್ದಾರೆ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ್ ಸುದ್ದಿಗೋಷ್ಟಿಯಲ್ಲಿದ್ದರು.
ಪದಾಧಿಕಾರಿಗಳ ಸಭೆಯಲ್ಲಿ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಯಾಯ್ತು. ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಬಿಜೆಪಿ ಸರ್ಕಾರ ಈ ವರ್ಗದ ಮೀಸಲಾತಿ ಹೆಚ್ಚು ಮಾಡಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ, ದಲಿತರ ಹೆಸರೇಳಿ ದಲಿತರ ಹೆಸರಲ್ಲಿ ಭ್ರಷ್ಟಾಚಾರ ಮಾಡಿದೆ. ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ, ಇಡೀ ಸಚಿವ ಸಂಪುಟ ದಲಿತರ ಹಣ ನುಂಗಲು ತಯಾರಿ ಮಡಿಕೊಂಡಿರೋದು ವಿಷಾದನೀಯ ಎಂದು ಸುನೀಲ್ ಕುಮಾರ್ ತಿಳಿಸಿದರು.
ಸರ್ಕಾರದ ಯೋಜನೆ ಮೂಲಕ, ದಲಿತ ಸಮುದಾಯದ ಏಳಿಗೆ ಮಾಡಬೇಕಿತ್ತು. ದಲಿತರಿಗೆ ಮೀಸಲಿಟ್ಟ ಹಣವನ್ನ ಲೂಟಿ ಮಾಡಿದೆ ಅಂತ ಬಿಜೆಪಿ ಒತ್ತಿ ಹೇಳಲಿದೆ. ವಾಲ್ಮೀಕಿ ಹಗರಣ, ಕಾರ್ಮಿಕರ ಇಲಾಖೆ ಹಗರಣ, SCP-TSP ಹಗರಣ ಹಗರಣಗಳ ಸರಮಾಲೆಯ ಸರ್ಕಾರ ಇದಾಗಿದೆ. ಇದನ್ನು ವಿರೋಧಿಸಿ ಜುಲೈ 15ರಂದು ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ ಚಲೋ ಕರೆ ನೀಡಲಾಗಿದೆ. ವಾಲ್ಮೀಕಿ ಸಮುದಾಯದ ದೊಡ್ಡ ಸಂಖ್ಯೆಯಲ್ಲಿ ಬರಲಿದೆ. ಸಿದ್ದರಾಮಯ್ಯ ಅವರ ನಿಲುವು ಖಂಡಿಸಿ ಮುತ್ತಿಗೆ ಹಾಕಲಿದೆ. ದಲಿತರ ಹಣ ಲೂಟಿ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ದಲಿತರ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…