Featured

ಸರ್ಕಾರದ ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಸರ್ಕಾರದ ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ : ಯಶ್ ಪಾಲ್ ಸುವರ್ಣ ಆಕ್ರೋಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿನ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಬೆದರಿ ಸರ್ಕಾರದ ವೈಫಲ್ಯ ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿರಿಯ ಪೋಲಿಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖುದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ರವರೇ ಈ ಅನಾಹುತಕ್ಕೆ ಪೊಲೀಸರು ಹೊಣೆಯಲ್ಲ ಎಂದು ಹೇಳಿಕೆ ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪಕ್ಷದ ಹೈಕಮಾಂಡ್ ಒತ್ತಡಕ್ಕೆ ಮಣಿದು ಸರ್ಕಾರದ ವರ್ಚಸ್ಸಿನ ಹಾನಿ ನಿಯಂತ್ರಿಸಲು ಈ ಕ್ರಮ ಕೈಗೊಂಡಿದೆ.

ಆರ್. ಸಿ. ಬಿ. ತಂಡದ ಐತಿಹಾಸಿಕ ಗೆಲುವಿನ ಸಾಧನೆಯನ್ನು ತಮ್ಮ ರಾಜಕೀಯ ಪ್ರತಿಷ್ಟೆಯ ಉದ್ದೇಶಕ್ಕಾಗಿ ಯಾವುದೇ ಪೂರ್ವ ತಯಾರಿ ಇಲ್ಲದೇ ಮಾಡಿದ ಪರಿಣಾಮದಿಂದ ಇಂದು 11 ಮಂದಿ ಅಮಾಯಕ ಯುವ ಜನತೆಯ ಹೃದಯವಿದ್ರಾವಕ ಸಾವಿಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು.

ಪೋಲಿಸರು ನೀಡಿದ ಅಪಾಯದ ಸೂಚನೆಯನ್ನು ಪರಿಗಣಿಸದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಿ ಉಂಟಾದ ದುರಂತಕ್ಕೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವುದು ಖಂಡನೀಯ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಮಾನಸಿಕ ಸ್ಥೈರ್ಯವನ್ನೇ ಕುಗ್ಗಿಸಲು ಮುಂದಾಗಿದೆ.

ಸರ್ಕಾರದ ಕೈಗೊಂಬೆಯಂತೆ ವರ್ತಿಸುವ ಪೋಲಿಸ್ ಇಲಾಖೆಗೂ ಸರ್ಕಾರದ ಈ ನಿರ್ಧಾರ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಸರಕಾರದ ಸ್ವಯಂಕೃತ ಅಪರಾಧದಿಂದ ಸಮಸ್ಯೆ ಉಂಟಾದಾಗ ಪೊಲೀಸರನ್ನೇ ಬಲಿಪಶು ಮಾಡಲು ಸರ್ಕಾರ ಹಿಂಜರಿಯುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago