ಮಡಿಕೇರಿ: ಸರ್ಕಾರವನ್ನು ಯಾರೇ ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು ಸಂತ್ರಸ್ತರ ಪರವಾಗಿ ಮುಂದಿನ ದಿನಗಳಲ್ಲಿ ಧ್ವನಿ ಎತ್ತುತ್ತೇವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ನದಿಯ ಪ್ರವಾಹಕ್ಕೆ ಸಿಲುಕಿದ ಕುಶಾಲನಗರದ ಕುವೆಂಪು, ಸಾಯಿ ಬಡಾವಣೆ, ತೆಪ್ಪದಕಂಡಿ, ನಂಜರಾಯಪಟ್ಟಣ, ನೆಲ್ಯಹುದಿಕೇರಿ, ಕುಂಬಾರಗುಂಡಿ ಹಾಗೂ ನೆಲ್ಯಹುದಿಕೇರಿ ಪ್ರದೇಶಗಳಿಗೆ ಭೇಟಿ ನೀಡಿ ನಿವಾಸಿಗಳ ಸಂಕಷ್ಟವನ್ನು ಆಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಇಲ್ಲಿಗೆ ರಾಜಕೀಯ ಮಾಡಲು ಬಂದಿಲ್ಲ. ಯಾರೇ ಸರ್ಕಾರವನ್ನು ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು. ಆಡಳಿತದ ಸರ್ಕಾರ ಘೋಷಣೆ ಹಾಗೂ ಭರವಸೆಗಳು ಹಾಗೆಯೇ ಉಳಿದುಕೊಳ್ಳಬಾರದು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.
ವಿಪರೀತ ಮಳೆ ಹಾಗೂ ಭೂಕುಸಿತದಿಂದ ಜಿಲ್ಲೆಯ ಜನತೆ ನಲುಗಿದ್ದಾರೆ. ಇಲ್ಲಿನ ಜನರು ಶಾಶ್ವತವಾದ ಪರಿಹಾರವನ್ನು ಕೇಳುತ್ತಿದ್ದಾರೆ. ಇಲ್ಲಿನ ಜನರು ಹಣಕ್ಕೆ ಆಸೆ ಪಡುತ್ತಿಲ್ಲ. ತಾತ್ಕಾಲಿಕ ಪರಿಹಾರವನ್ನು ಯಾರೂ ನಿರಿಕ್ಷಿಸುತ್ತಿಲ್ಲ. 2018 ರ ಸಮ್ಮಿಶ್ರ ಸರ್ಕಾರದಲ್ಲಿ 9.85 ಲಕ್ಷ ವೆಚ್ಚದಲ್ಲಿ ನಿರಾಶ್ರಿತರಿಗೆ ಒಂದು ಸಾವಿರ ಮನೆಗಳನ್ನು ಕಟ್ಟಿಕೊಡಲಾಗಿತ್ತು ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…