ಸರ್ಕಾರವನ್ನು ಯಾರೇ ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು ,ಸಂತ್ರಸ್ತರ ಪರವಾಗಿ ಮುಂದಿನ ದಿನಗಳಲ್ಲಿ ಧ್ವನಿ ಎತ್ತುತ್ತೇವೆ : ನಿಖಿಲ್ ಕುಮಾರಸ್ವಾಮಿ -Vishwanews24

ಮಡಿಕೇರಿ: ಸರ್ಕಾರವನ್ನು ಯಾರೇ ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು ಸಂತ್ರಸ್ತರ ಪರವಾಗಿ ಮುಂದಿನ ದಿನಗಳಲ್ಲಿ ಧ್ವನಿ ಎತ್ತುತ್ತೇವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ನದಿಯ ಪ್ರವಾಹಕ್ಕೆ ಸಿಲುಕಿದ ಕುಶಾಲನಗರದ ಕುವೆಂಪು, ಸಾಯಿ ಬಡಾವಣೆ, ತೆಪ್ಪದಕಂಡಿ, ನಂಜರಾಯಪಟ್ಟಣ, ನೆಲ್ಯಹುದಿಕೇರಿ, ಕುಂಬಾರಗುಂಡಿ ಹಾಗೂ ನೆಲ್ಯಹುದಿಕೇರಿ ಪ್ರದೇಶಗಳಿಗೆ ಭೇಟಿ ನೀಡಿ ನಿವಾಸಿಗಳ ಸಂಕಷ್ಟವನ್ನು ಆಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಇಲ್ಲಿಗೆ ರಾಜಕೀಯ ಮಾಡಲು ಬಂದಿಲ್ಲ. ಯಾರೇ ಸರ್ಕಾರವನ್ನು ನಡೆಸಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತಾಗಿ ಸ್ಪಂದಿಸಬೇಕು. ಆಡಳಿತದ ಸರ್ಕಾರ ಘೋಷಣೆ ಹಾಗೂ ಭರವಸೆಗಳು ಹಾಗೆಯೇ ಉಳಿದುಕೊಳ್ಳಬಾರದು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ವಿಪರೀತ ಮಳೆ ಹಾಗೂ ಭೂಕುಸಿತದಿಂದ ಜಿಲ್ಲೆಯ ಜನತೆ ನಲುಗಿದ್ದಾರೆ. ಇಲ್ಲಿನ ಜನರು ಶಾಶ್ವತವಾದ ಪರಿಹಾರವನ್ನು ಕೇಳುತ್ತಿದ್ದಾರೆ. ಇಲ್ಲಿನ ಜನರು ಹಣಕ್ಕೆ ಆಸೆ ಪಡುತ್ತಿಲ್ಲ. ತಾತ್ಕಾಲಿಕ ಪರಿಹಾರವನ್ನು ಯಾರೂ ನಿರಿಕ್ಷಿಸುತ್ತಿಲ್ಲ. 2018 ರ ಸಮ್ಮಿಶ್ರ ಸರ್ಕಾರದಲ್ಲಿ 9.85 ಲಕ್ಷ ವೆಚ್ಚದಲ್ಲಿ ನಿರಾಶ್ರಿತರಿಗೆ ಒಂದು ಸಾವಿರ ಮನೆಗಳನ್ನು ಕಟ್ಟಿಕೊಡಲಾಗಿತ್ತು ಎಂದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago