Featured

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ – Vishwanews24

ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಲಂಚ ಪಡೆದ ಸಿಬ್ಬಂದಿ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ  ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಸಿಬ್ಬಂದಿ ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ವಿಚಾರ ಬಹಿರಂಗವಾಗಿ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆಯೇ ಲಂಚ ಪಡೆದಿದ್ದ ಹಣವನ್ನು ವಾಪಸ್ ನೀಡಿ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2000 ರೂ. ಲಂಚಕ್ಕೆ ಬೇಡಿಕೆ ಇಟ್ಟು 1,500 ರೂ. ಕೊಟ್ಟರೂ ಪೋಸ್ಟ್ ಮಾರ್ಟಂ ಮಾಡಿಲ್ಲ ಎಂದು ಸಂತ್ರಸ್ತೆಯ ಕುಟುಂಬದವರು ಆರೋಪಿಸಿದ್ದಾರೆ.

ಸಿಂಧನೂರು ತಾಲ್ಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ (57) ಎಂಬವರು ಶುಕ್ರವಾರ ಕೆಂಗಲ್ ಗ್ರಾಮದಿಂದ ದಡೆಸುಗೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಮೂರ್ಛೆ ರೋಗದಿಂದ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ಕೊಂಡೊಯ್ಯಲಾಗಿತ್ತು. ಈ ವೇಳೆ, ಮಂಜುನಾಥ್ ಎಂಬ ಸಿಬ್ಬಂದ ಮರಣೋತ್ತರ ಪರೀಕ್ಷೆಗೆ 2000 ರೂ.ಡಿಮ್ಯಾಂಡ್ ಮಾಡಿದ್ದಾರೆ. ಸಿಬ್ಬಂದಿ ದರ್ಪಕ್ಕೆ ಬೇಸತ್ತು‌ ಮೃತ ಮಹಿಳೆಯ ಕುಟುಂಬದವರು 1500 ರೂ.ನೀಡಿದ್ದರು. ಆದರೆ, ಇನ್ನೂ ‌500 ರೂ.ಕೊಟ್ಟರೆ ಮಾತ್ರ ಪೋಸ್ಟ್ ಮಾರ್ಟಮ್ ಎಂದಿ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ.

ಆಗ ಶವಾಗಾರದ ಬಳಿ ಕರ್ನಾಟಕ ಪ್ರಾಂತ್ಯ ಕೂಲಿಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಲಂಚ ಪಡೆದ ಸಿಬ್ಬಂದಿ ಮಂಜುನಾಥ್ ಅಮಾನತಿಗೆ ಆಗ್ರಹಿಸಿದ್ದಾರೆ. ಕೊನೆಗೆ ಲಂಚ ಪಡೆದಿದ ವ್ಯಕ್ತಿ 1500 ರೂ. ವಾಪಸ್ ನೀಡಿ ಓಡಿ ಹೋಗಿದ್ದಾನೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

19 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago