ಬೆಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಇನ್ನು ಮುಂದೆ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು ಇನ್ನು ಮುಂದೆ ಒಂದೇ ಒಂದು ರೂಪಾಯಿ ಶುಲ್ಕ ಕಟ್ಟುವಂತೆ ಇಲ್ಲ. ವಿದ್ಯಾರ್ಥಿನಿಯರ ಕಾಲೇಜು ಶುಲ್ಕವನ್ನು ಸರ್ಕಾರವೇ ಕಟ್ಟಲಿದೆ.
ಇಷ್ಟು ದಿನ ಕಾಲೇಜಿಗೆ ದಾಖಲಾಗುವ ವೇಳೆ ವಿದ್ಯಾರ್ಥಿಗಳಿಂದ ಶುಲ್ಕ ಅಂತ 456 ರೂಪಾಯಿ ಕಟ್ಟಿಸಿಕೊಳ್ಳಲಾಗುತ್ತಿತ್ತು. ಬಳಿಕ ಅ ಹಣವನ್ನು ವಿದ್ಯಾರ್ಥಿನಿಯರ ಖಾತೆಗೆ ವಾಪಸ್ ಹಾಕಲಾಗುತ್ತಿತ್ತು. ಇದರಿಂದ ಅನೇಕ ಸಮಸ್ಯೆ ಉಂಟಾಗುತ್ತಿತ್ತು.
ವಿದ್ಯಾರ್ಥಿನಿಯರಿಗೆ ದಾಖಲಾತಿ ಸಮಯದಲ್ಲಿ ಹಣ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಇನ್ನು ಮುಂದೆ ಸರ್ಕಾರವೇ ಶುಲ್ಕ ಪಾವತಿ ಮಾಡಲಿದೆ. ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತದೆ. ಇದರಿಂದ ದಾಖಲಾತಿ ವೇಳೆ ವಿದ್ಯಾರ್ಥಿನಿಯರು ಉಚಿತವಾಗಿ ಕಾಲೇಜಿಗೆ ದಾಖಲು ಆಗಬಹುದಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…