ಬೆಂಗಳೂರು: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಆಶ್ಲೀಲವಾಗಿ ನಡೆದುಕೊಳ್ಳುವಂತೆ ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ” ಇದು ಸಿಡಿ ಪ್ರಕರಣದಲ್ಲಿ ಯುವತಿ ಇಂದು ನೀಡಿದ ದೂರಿನ ಸಾರಾಂಶ.
ಯುವತಿ ಇಂದು ವಕೀಲ ಜಗದೀಶ್ ಅವರ ಮೂಲಕ ಲಿಖಿತ ದೂರನ್ನು ಪೊಲೀಸರಿಗೆ ನೀಡಿದ್ದಾಳೆ.
ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24
“ನಾನು ಬೆಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು, ಕಿರುಚಿತ್ರ ಮಾಡುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ಸಚಿವರು ನನ್ನ ಕುಟುಂಬದ ಬಗ್ಗೆ ವಿಚಾರಿಸಿ ಆಪ್ತವಾಗಿ ಮಾತನಾಡುತ್ತಿದ್ದರು. ನನಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದರು. ನನ್ನ ಬಳಿ ಲಕ್ಷಾಂತರ ರೂ ಹಣವಿಲ್ಲವೆಂದು ತಿಳಿದ ಅವರು, ಅವರು ಹೇಳಿದಂತೆ ಕೇಳಬೇಕೆಂದು ಹೇಳಿದ್ದರು” ಎಂದು ದೂರಿನಲ್ಲಿ ವಿವರಿಸಲಾಗಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಅವರು ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದರು. ಅವರು ಪ್ರಭಾವಿಯಾದ ಕಾರಣ ಅವರು ಹೇಳಿದಂತೆ ನಾನು ಕೇಳಿದೆ. ನಂತರ ಬೆಂಗಳೂರು ನಿವಾಸಕ್ಕೆ ಬಂದು ಕೆಲಸದ ವಿಚಾರ ಮಾತನಾಡುವುದಿದೆ, ಮನೆಗೆ ಬಾ ಎಂದು ಕರೆದಿದ್ದರು. ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ, ಕೋಣೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿದರು. ಎರಡು ಬಾರಿ ಈ ರೀತಿ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24
ನನಗೆ ಸರ್ಕಾರಿ ನೌಕರಿ ನೀಡದೆ ಮೋಸ ಮಾಡಿದ್ದಾರೆ. ನಾನು ದೂರು ನೀಡದಂತೆ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಭದ್ರತೆ ಇಲ್ಲದ ಕಾರಣ ನಾನು ಪರಿಚಿತ ವಕೀಲರ ಮೂಲಕ ದೂರು ನೀಡುತ್ತಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…