ಬೆಂಗಳೂರು: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಆಶ್ಲೀಲವಾಗಿ ನಡೆದುಕೊಳ್ಳುವಂತೆ ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ” ಇದು ಸಿಡಿ ಪ್ರಕರಣದಲ್ಲಿ ಯುವತಿ ಇಂದು ನೀಡಿದ ದೂರಿನ ಸಾರಾಂಶ.
ಯುವತಿ ಇಂದು ವಕೀಲ ಜಗದೀಶ್ ಅವರ ಮೂಲಕ ಲಿಖಿತ ದೂರನ್ನು ಪೊಲೀಸರಿಗೆ ನೀಡಿದ್ದಾಳೆ.
ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24
“ನಾನು ಬೆಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು, ಕಿರುಚಿತ್ರ ಮಾಡುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ಸಚಿವರು ನನ್ನ ಕುಟುಂಬದ ಬಗ್ಗೆ ವಿಚಾರಿಸಿ ಆಪ್ತವಾಗಿ ಮಾತನಾಡುತ್ತಿದ್ದರು. ನನಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದರು. ನನ್ನ ಬಳಿ ಲಕ್ಷಾಂತರ ರೂ ಹಣವಿಲ್ಲವೆಂದು ತಿಳಿದ ಅವರು, ಅವರು ಹೇಳಿದಂತೆ ಕೇಳಬೇಕೆಂದು ಹೇಳಿದ್ದರು” ಎಂದು ದೂರಿನಲ್ಲಿ ವಿವರಿಸಲಾಗಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಅವರು ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದರು. ಅವರು ಪ್ರಭಾವಿಯಾದ ಕಾರಣ ಅವರು ಹೇಳಿದಂತೆ ನಾನು ಕೇಳಿದೆ. ನಂತರ ಬೆಂಗಳೂರು ನಿವಾಸಕ್ಕೆ ಬಂದು ಕೆಲಸದ ವಿಚಾರ ಮಾತನಾಡುವುದಿದೆ, ಮನೆಗೆ ಬಾ ಎಂದು ಕರೆದಿದ್ದರು. ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ, ಕೋಣೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿದರು. ಎರಡು ಬಾರಿ ಈ ರೀತಿ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24
ನನಗೆ ಸರ್ಕಾರಿ ನೌಕರಿ ನೀಡದೆ ಮೋಸ ಮಾಡಿದ್ದಾರೆ. ನಾನು ದೂರು ನೀಡದಂತೆ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಭದ್ರತೆ ಇಲ್ಲದ ಕಾರಣ ನಾನು ಪರಿಚಿತ ವಕೀಲರ ಮೂಲಕ ದೂರು ನೀಡುತ್ತಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…