ಬೆಂಗಳೂರು: “ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿ, ವಿಡಿಯೋ ಕರೆ ಮಾಡಿ ಆಶ್ಲೀಲವಾಗಿ ನಡೆದುಕೊಳ್ಳುವಂತೆ ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ” ಇದು ಸಿಡಿ ಪ್ರಕರಣದಲ್ಲಿ ಯುವತಿ ಇಂದು ನೀಡಿದ ದೂರಿನ ಸಾರಾಂಶ.
ಯುವತಿ ಇಂದು ವಕೀಲ ಜಗದೀಶ್ ಅವರ ಮೂಲಕ ಲಿಖಿತ ದೂರನ್ನು ಪೊಲೀಸರಿಗೆ ನೀಡಿದ್ದಾಳೆ.
ಇದನ್ನೂ ಓದಿ : ಮುಂಬೈ :ರೋಗಿಗಳ ಸಂಖ್ಯೆ ಹೆಚ್ಚಾದರೆ ಮತ್ತೆ ಕಟ್ಟುನಿಟ್ಟಿನ ಲಾಕ್ ಡೌನ್: ಮಹಾ ಡಿಸಿಎಂ ಅಜಿತ್ ಪವಾರ್ ಎಚ್ಚರಿಕೆ -Vishwanews24
“ನಾನು ಬೆಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು, ಕಿರುಚಿತ್ರ ಮಾಡುವ ಸಲುವಾಗಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ಸಚಿವರು ನನ್ನ ಕುಟುಂಬದ ಬಗ್ಗೆ ವಿಚಾರಿಸಿ ಆಪ್ತವಾಗಿ ಮಾತನಾಡುತ್ತಿದ್ದರು. ನನಗೆ ಸರ್ಕಾರಿ ನೌಕರಿ ನೀಡುವುದಾಗಿ ಹೇಳಿದ್ದರು. ನನ್ನ ಬಳಿ ಲಕ್ಷಾಂತರ ರೂ ಹಣವಿಲ್ಲವೆಂದು ತಿಳಿದ ಅವರು, ಅವರು ಹೇಳಿದಂತೆ ಕೇಳಬೇಕೆಂದು ಹೇಳಿದ್ದರು” ಎಂದು ದೂರಿನಲ್ಲಿ ವಿವರಿಸಲಾಗಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಅವರು ವಿಡಿಯೋ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದರು. ಅವರು ಪ್ರಭಾವಿಯಾದ ಕಾರಣ ಅವರು ಹೇಳಿದಂತೆ ನಾನು ಕೇಳಿದೆ. ನಂತರ ಬೆಂಗಳೂರು ನಿವಾಸಕ್ಕೆ ಬಂದು ಕೆಲಸದ ವಿಚಾರ ಮಾತನಾಡುವುದಿದೆ, ಮನೆಗೆ ಬಾ ಎಂದು ಕರೆದಿದ್ದರು. ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ಮಾತನಾಡಿ, ಕೋಣೆಯಲ್ಲಿ ಲೈಂಗಿಕ ಕ್ರಿಯೆ ನಡೆಸಿದರು. ಎರಡು ಬಾರಿ ಈ ರೀತಿ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಅಂತಹ ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇನೆ, ಇನ್ನು ಇದ್ಯಾವ ಲೆಕ್ಕ : ರಮೇಶ್ ಜಾರಕಿಹೊಳಿ -Vishwanews24
ನನಗೆ ಸರ್ಕಾರಿ ನೌಕರಿ ನೀಡದೆ ಮೋಸ ಮಾಡಿದ್ದಾರೆ. ನಾನು ದೂರು ನೀಡದಂತೆ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಭದ್ರತೆ ಇಲ್ಲದ ಕಾರಣ ನಾನು ಪರಿಚಿತ ವಕೀಲರ ಮೂಲಕ ದೂರು ನೀಡುತ್ತಿದ್ದೇನೆ ಎಂದು ಯುವತಿ ತಿಳಿಸಿದ್ದಾಳೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…