Featured

ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ – vishwanews24

ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಯುವಕ ಅಂಜಿನಪ್ಪ (26) ನೇಣು ಬಿಗಿದುಕೊಂಡ ಅತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಅಂಜಿನಪ್ಪ ಪದವಿ ಮುಗಿಸಿದಾಗಿನಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿದ್ದ. ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಕೊಠಡಿಯಲ್ಲಿ ಎಲ್ಲಿ ನೋಡಿದರೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳೇ ಇದ್ದವು. ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.

ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮನೆಯ ಮೇಲೆ ಅಂಜಿನಪ್ಪನ ತಾಯಿ ಬಟ್ಟೆ ತೊಳೆದು ಒಣಗಿ ಹಾಕಿದ್ದ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ ಊಟಕ್ಕೆ ಬಂದಿಲ್ಲ ಎಂದು ಮನೆಯವರು ಬಾಗಿಲು ಬಡಿದರೂ ಮಗ ಬಾಗಿಲು ತೆಗೆದಿಲ್ಲ. ಮಲಗಿರಬಹುದೇನೋ ಎಂದು ಭಾವಿಸಿ ಪೋಷಕರು ಸುಮ್ಮನಾಗಿದ್ದರು. ಬೆಳಗ್ಗೆ ಮತ್ತೆ ಬಾಗಿಲು ತಟ್ಟಿದರೂ ಅಂಜಿನಪ್ಪ ಬಾಗಿಲು ತೆಗೆದಿಲ್ಲ. ನಂತರ ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬ0ಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago