ದಾವಣಗೆರೆ: ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಯುವಕ ಅಂಜಿನಪ್ಪ (26) ನೇಣು ಬಿಗಿದುಕೊಂಡ ಅತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಅಂಜಿನಪ್ಪ ಪದವಿ ಮುಗಿಸಿದಾಗಿನಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತಿದ್ದ. ಅಲ್ಲದೇ ತನ್ನ ರೂಂನಲ್ಲಿ ನಿರಂತರವಾಗಿ ಓದುತ್ತಿದ್ದ. ಆದರೂ ತಾನು ಪಟ್ಟ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ ಎಂದು ಮನ ನೊಂದಿದ್ದ. ಅಲ್ಲದೇ, ಕೊಠಡಿಯಲ್ಲಿ ಎಲ್ಲಿ ನೋಡಿದರೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳೇ ಇದ್ದವು. ಎಷ್ಟೇ ಪ್ರಯತ್ನ ಪಟ್ಟರೂ ಕೆಲಸ ಸಿಗುತ್ತಿಲ್ಲ ಎಂದು ಸ್ನೇಹಿತರ ಬಳಿ ಆಗಾಗ ಬೇಸರ ತೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮನೆಯ ಮೇಲೆ ಅಂಜಿನಪ್ಪನ ತಾಯಿ ಬಟ್ಟೆ ತೊಳೆದು ಒಣಗಿ ಹಾಕಿದ್ದ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ ಊಟಕ್ಕೆ ಬಂದಿಲ್ಲ ಎಂದು ಮನೆಯವರು ಬಾಗಿಲು ಬಡಿದರೂ ಮಗ ಬಾಗಿಲು ತೆಗೆದಿಲ್ಲ. ಮಲಗಿರಬಹುದೇನೋ ಎಂದು ಭಾವಿಸಿ ಪೋಷಕರು ಸುಮ್ಮನಾಗಿದ್ದರು. ಬೆಳಗ್ಗೆ ಮತ್ತೆ ಬಾಗಿಲು ತಟ್ಟಿದರೂ ಅಂಜಿನಪ್ಪ ಬಾಗಿಲು ತೆಗೆದಿಲ್ಲ. ನಂತರ ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬ0ಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…