Featured

ಸರ್ಕಾರಿ ನೌಕರರ ಮುಷ್ಕರ : ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್, ರೋಗಿಗಳ ಪರದಾಟ – Vishwanews24

ಸರ್ಕಾರಿ ನೌಕರರ ಮುಷ್ಕರ : ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್, ರೋಗಿಗಳ ಪರದಾಟ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರಕ್ಕೆ ಇಂದಿನಿಂದ ಕರೆ ನೀಡಿದ್ದಾರೆ. ಇದಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಬೆಂಬಲ ನೀಡರುವ ಕಾರಣ, ಇಂದು ರಾಜ್ಯಾಧ್ಯಂತ ಜಿಲ್ಲಾಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಆದಂತೆ ಆಗಿದೆ.

ಚಿತ್ರದುರ್ಗ ಸರ್ಕಾರಿ ಜಿಲ್ಲಾಸ್ಪತ್ರೆ, ತುಮಕೂರು ಜಿಲ್ಲಾಸ್ಪತ್ರೆ, ಮೈಸೂರಿನ ಕೆ ಆರ್ ಆಸ್ಪತ್ರೆ, ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗಳಲ್ಲಿ ಒಳರೋಗಿಗಳ ಚಿಕಿತ್ಸೆಯ ಸೇವೆಯನ್ನು ಬಂದ್ ಮಾಡಲಾಗಿದೆ. ಕೇವಲ ತುರ್ತು ಸೇವೆಯನ್ನು ಮಾತ್ರವೇ ಒದಗಿಸಲಾಗುತ್ತಿದೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಪಘಾತ, ತುರ್ತು ಚಿಕಿತ್ಸೆಗೆ ಮಾತ್ರವೇ ಸೇವೆಯನ್ನು ಒದಗಿಸಲಾಗುತ್ತಿದ್ದು, ಇನ್ನುಳಿದಂತೆ ಒಪಿಡಿ ಸೇವೆಯನ್ನು ಸಂಪೂರ್ಣವಾಗಿ ಬಂದ್ ಮಾಡಿರೋ ಕಾರಣ ರೋಗಿಗಳು ಪರದಾಡುವಂತೆ ಆಗಿದೆ.

ಕೇವಲ ಜಿಲ್ಲಾಸ್ಪತ್ರೆಯಷ್ಟೇ ಅಲ್ಲದೇ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಒಪಿಡಿ ಸೇವೆಯನ್ನು ಇಂದು ಬಂದ್ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಹೀಗೆ ಆಗಿದ್ದೇ ಆದ್ರೇ ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತೆ ಆಗಲಿದೆ. ಸೂಕ್ತ ಕಾಲದಲ್ಲಿ ಚಿಕಿತ್ಸೆ ಸಿಗದೇ ವಯೋವೃದ್ಧರಾದಿಯಾಗಿ, ರೋಗಿಗಳು ಸಂಕಷ್ಟಕ್ಕೆ ಸಿಲುಕುವಂತೆ ಆಗಲಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago