Featured

ಸರ್ಕಾರಿ ಭರವಸೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ರಾಜೀನಾಮೆ -Vishwanews24

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದ್ದು, ಭರವಸೆಗಳ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರಕಲಗೂಡು ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ರಾಜೀನಾಮೆ ನೀಡಿದ್ದಾರೆ.

ರಾಮಸ್ವಾಮಿ ಅವರು ಈಗಾಗಲೇ ತನ್ನ ರಾಜೀನಾಮೆ ಪತ್ರವನ್ನು ಸ್ಪೀಕರ್ ಮತ್ತು ಮುಖ್ಯಮಂತ್ರಿಗೆ ರವಾನಿಸಿದ್ದಾರೆ.

ಕೆಂಗೇರಿ ಸಮೀಪದ ಬಿಎಂ ಕಾವಲು ಪ್ರದೇಶದಲ್ಲಿ 305 ಎಕರೆ ಭೂಗಳ್ಳರ ಪಾಲಾಗಿದೆ. ಭೂಗಳ್ಳರಿಂದ ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮೈತ್ರಿ ಸರ್ಕಾರ ಹಿಂದೆ ಸರಿದಿದೆ. ಅಲ್ಲದೆ 300 ಎಕರೆಗೂ ಹೆಚ್ಚು ಭೂಮಿ ತೆರವಿಗೆ ಸರ್ಕಾರ ಮುಂದಾಗಲಿಲ್ಲ. ಇದರಿಂದ ಬೇಸರಗೊಂಡು ರಾಮಸ್ವಾಮಿ ಅವರು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸಮಿತಿ ಸಭೆಯಲ್ಲಿ ಬಿ. ಎಂ ಕಾವಲ್ ಪ್ರಕರಣ ಚರ್ಚೆಯವಿಷಯವಾಗಿತ್ತು. ಪ್ರಕರಣದಲ್ಲಿ ಅಕ್ರಮ ನಡೆದಿರುವುದು ಸತ್ಯವಾದರೂ ಅಧಿಕಾರಿಗಳು ಹಾಗೂ ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸರಗೊಂಡು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಯುಎನ್ಐ ಸುದ್ದಿ ಸಂಸ್ಥೆಗೆ ಎ.ಟಿ. ರಾಮಸ್ವಾಮಿ ತಿಳಿಸಿದ್ದಾರೆ.
ಎ ಟಿ ರಾಮಸ್ವಾಮಿ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದಾರೆ

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago