ಉಡುಪಿ: ಕಾಂಗ್ರೆಸ್ ಸರ್ಕಾರ ಮಾಡಿದ ಭೂ ಸುಧಾರಣೆ ಕಾನೂನಿನಿಂದ ಕೃಷಿಕರು, ರೈತರು ಹಾಗೂ ಬಡವರು ಇಂದು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರೆ ಅದೇ ಕಾನೂನನ್ನು ಬದಲಾವಣೆ ಮಾಡಬೇಕು ಎನ್ನುವ ಮೂಲಕ ವ್ಯಾಪಾರಸ್ಥರು, ಕಾರ್ಪೋರೆಟ್ ಕಂಪೆನಿಗಳಿಗೆ ಅನುಕೂಲ ಕಲ್ಪಿಸುವ ಮೂಲಕ ಕಾರ್ಪೋರೆಟ್ ಕಂಪೆನಿಗಳ ಏಜೆಂಟ್ ಆಗಿ ಈಗಿನ ಮೋದಿ ನೇತೃತ್ವದ ಬಿಜೆಪಿ ಸರಕಾರ ವರ್ತಿಸುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.
ಅವರು ಮಂಗಳವಾರ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದಬಡಪಾಯಿ ಬೀಡಿ ಕಾರ್ಮಿಕರ ಜೀವನಕ್ಕೆ ಮಾರಕ ವಾಗಲಿರುವ ಕಾಯ್ದೆಯನ್ನು ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಕರ್ನಾಟಕ ರಾಜ್ಯದ ಅವಳಿ ಕರಾವಳಿ ಜಿಲ್ಲೆಗಳಾದ ಮಂಗಳೂರು- ಉಡುಪಿ ಜಿಲ್ಲೆಗಳ ಆರ್ಥಿಕತೆಯ ಪ್ರಮುಖ ಮೂಲ ಬೀಡಿ ಉದ್ಯಮವಾಗಿದೆ. ಈ ಜಿಲ್ಲೆಗಳಲ್ಲಿ ಸರಿಸುಮಾರು 2.5 ಲಕ್ಷ ಬೀಡಿ ಕಾರ್ಮಿಕರಿದ್ದರೆ, ಇವರಲ್ಲಿ ಬಹುತೇಕ ಮಹಿಳೆಯರು. ತಮ್ಮ ಕುಟುಂಬದಲ್ಲಿ ಸಂಸಾರದ ಜವಾಬ್ದಾರಿ ನಿರ್ವಹಿಸುವವರು ಅವರೇ ಅಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಒಂಟಿ ಮಹಿಳೆಯರೂ ಇದ್ದಾರೆ. ಇವರ ಪುರ್ನವಸತಿಗೆ ಕಾರ್ಯಕ್ರಮ ರೂಪಿಸದೆ ಇದನ್ನು ಜಾರಿ ಮಾಡಿದಲ್ಲಿ ಈ ಭಾಗದಲ್ಲಿ ಜನತೆಯ ಬದುಕು ನರಕಮಯವಾಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ರೈತ ವಿರೋಧಿ, ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದಾರೆ. ಎಪಿಎಂಸಿ, ಲೇಬರ್ ಆ್ಯಕ್ಟ್ ಗೆ ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲೂ ಲೇಬರ್ ಆ್ಯಕ್ಟ್, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕಾನೂನುಗಳಿಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. ಸರ್ಕಾರ, ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದರು. ಈ ಹೋರಾಟವನ್ನು ಕೇವಲ ಕಾಪುವಿಗೆ ಸೀಮಿತಗೊಳಿಸದೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.
ಪ್ರತಿಭಟನೆಯಲ್ಲಿ ನಾಯಕರುಗಳಾದ ನವೀನ್ ಚಂದ್ರ ಎಸ್ ಸುವರ್ಣ, ನವೀನ್ ಚಂದ್ರ ಶೆಟ್ಟಿ, ಸರಸು ಡಿ ಬಂಗೇರಾ, ಐಡಾ ಗಿಬ್ಬಾ ಡಿಸೋಜಾ, ಸುನೀಲ್ ಬಂಗೇರಾ, ಪ್ರಭಾಕರ ಆಚಾರ್ಯ, ಸಿ ಐಟಿಯು ನಾಯಕರಾದ ಮಹಾಬಲ ವಡೇರಹೋಬಳಿ, ಕವಿರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ : ಡಿಕೆ ಶಿ -Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…