Featured

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಉಡುಪಿ: ಕಾಂಗ್ರೆಸ್ ಸರ್ಕಾರ ಮಾಡಿದ ಭೂ ಸುಧಾರಣೆ ಕಾನೂನಿನಿಂದ ಕೃಷಿಕರು, ರೈತರು ಹಾಗೂ ಬಡವರು ಇಂದು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರೆ ಅದೇ ಕಾನೂನನ್ನು ಬದಲಾವಣೆ ಮಾಡಬೇಕು ಎನ್ನುವ ಮೂಲಕ ವ್ಯಾಪಾರಸ್ಥರು, ಕಾರ್ಪೋರೆಟ್ ಕಂಪೆನಿಗಳಿಗೆ ಅನುಕೂಲ ಕಲ್ಪಿಸುವ ಮೂಲಕ ಕಾರ್ಪೋರೆಟ್ ಕಂಪೆನಿಗಳ ಏಜೆಂಟ್ ಆಗಿ ಈಗಿನ ಮೋದಿ ನೇತೃತ್ವದ ಬಿಜೆಪಿ ಸರಕಾರ ವರ್ತಿಸುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಅವರು ಮಂಗಳವಾರ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದಬಡಪಾಯಿ ಬೀಡಿ ಕಾರ್ಮಿಕರ ಜೀವನಕ್ಕೆ ಮಾರಕ ವಾಗಲಿರುವ ಕಾಯ್ದೆಯನ್ನು ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ರಾಜ್ಯದ ಅವಳಿ ಕರಾವಳಿ ಜಿಲ್ಲೆಗಳಾದ ಮಂಗಳೂರು- ಉಡುಪಿ ಜಿಲ್ಲೆಗಳ ಆರ್ಥಿಕತೆಯ ಪ್ರಮುಖ ಮೂಲ ಬೀಡಿ ಉದ್ಯಮವಾಗಿದೆ. ಈ ಜಿಲ್ಲೆಗಳಲ್ಲಿ ಸರಿಸುಮಾರು 2.5 ಲಕ್ಷ ಬೀಡಿ ಕಾರ್ಮಿಕರಿದ್ದರೆ, ಇವರಲ್ಲಿ ಬಹುತೇಕ ಮಹಿಳೆಯರು. ತಮ್ಮ ಕುಟುಂಬದಲ್ಲಿ ಸಂಸಾರದ ಜವಾಬ್ದಾರಿ ನಿರ್ವಹಿಸುವವರು ಅವರೇ ಅಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಒಂಟಿ ಮಹಿಳೆಯರೂ ಇದ್ದಾರೆ. ಇವರ ಪುರ್ನವಸತಿಗೆ ಕಾರ್ಯಕ್ರಮ ರೂಪಿಸದೆ ಇದನ್ನು ಜಾರಿ ಮಾಡಿದಲ್ಲಿ ಈ ಭಾಗದಲ್ಲಿ ಜನತೆಯ ಬದುಕು ನರಕಮಯವಾಗಲಿದೆ.

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ರೈತ ವಿರೋಧಿ, ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದಾರೆ. ಎಪಿಎಂಸಿ, ಲೇಬರ್ ಆ್ಯಕ್ಟ್ ಗೆ ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲೂ ಲೇಬರ್ ಆ್ಯಕ್ಟ್, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕಾನೂನುಗಳಿಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. ಸರ್ಕಾರ, ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದರು. ಈ ಹೋರಾಟವನ್ನು ಕೇವಲ ಕಾಪುವಿಗೆ ಸೀಮಿತಗೊಳಿಸದೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.

ಪ್ರತಿಭಟನೆಯಲ್ಲಿ ನಾಯಕರುಗಳಾದ ನವೀನ್ ಚಂದ್ರ ಎಸ್ ಸುವರ್ಣ, ನವೀನ್ ಚಂದ್ರ ಶೆಟ್ಟಿ, ಸರಸು ಡಿ ಬಂಗೇರಾ, ಐಡಾ ಗಿಬ್ಬಾ ಡಿಸೋಜಾ, ಸುನೀಲ್ ಬಂಗೇರಾ, ಪ್ರಭಾಕರ ಆಚಾರ್ಯ, ಸಿ ಐಟಿಯು ನಾಯಕರಾದ ಮಹಾಬಲ ವಡೇರಹೋಬಳಿ, ಕವಿರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ : ಡಿಕೆ ಶಿ -Vishwanews24

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

12 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

12 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

12 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

13 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

13 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

14 hours ago