Featured

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಸರ್ಕಾರ ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ :ವಿನಯ್ ಕುಮಾರ್ ಸೊರಕೆ -Vishwanews24

ಉಡುಪಿ: ಕಾಂಗ್ರೆಸ್ ಸರ್ಕಾರ ಮಾಡಿದ ಭೂ ಸುಧಾರಣೆ ಕಾನೂನಿನಿಂದ ಕೃಷಿಕರು, ರೈತರು ಹಾಗೂ ಬಡವರು ಇಂದು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರೆ ಅದೇ ಕಾನೂನನ್ನು ಬದಲಾವಣೆ ಮಾಡಬೇಕು ಎನ್ನುವ ಮೂಲಕ ವ್ಯಾಪಾರಸ್ಥರು, ಕಾರ್ಪೋರೆಟ್ ಕಂಪೆನಿಗಳಿಗೆ ಅನುಕೂಲ ಕಲ್ಪಿಸುವ ಮೂಲಕ ಕಾರ್ಪೋರೆಟ್ ಕಂಪೆನಿಗಳ ಏಜೆಂಟ್ ಆಗಿ ಈಗಿನ ಮೋದಿ ನೇತೃತ್ವದ ಬಿಜೆಪಿ ಸರಕಾರ ವರ್ತಿಸುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಅವರು ಮಂಗಳವಾರ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದಬಡಪಾಯಿ ಬೀಡಿ ಕಾರ್ಮಿಕರ ಜೀವನಕ್ಕೆ ಮಾರಕ ವಾಗಲಿರುವ ಕಾಯ್ದೆಯನ್ನು ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ರಾಜ್ಯದ ಅವಳಿ ಕರಾವಳಿ ಜಿಲ್ಲೆಗಳಾದ ಮಂಗಳೂರು- ಉಡುಪಿ ಜಿಲ್ಲೆಗಳ ಆರ್ಥಿಕತೆಯ ಪ್ರಮುಖ ಮೂಲ ಬೀಡಿ ಉದ್ಯಮವಾಗಿದೆ. ಈ ಜಿಲ್ಲೆಗಳಲ್ಲಿ ಸರಿಸುಮಾರು 2.5 ಲಕ್ಷ ಬೀಡಿ ಕಾರ್ಮಿಕರಿದ್ದರೆ, ಇವರಲ್ಲಿ ಬಹುತೇಕ ಮಹಿಳೆಯರು. ತಮ್ಮ ಕುಟುಂಬದಲ್ಲಿ ಸಂಸಾರದ ಜವಾಬ್ದಾರಿ ನಿರ್ವಹಿಸುವವರು ಅವರೇ ಅಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಒಂಟಿ ಮಹಿಳೆಯರೂ ಇದ್ದಾರೆ. ಇವರ ಪುರ್ನವಸತಿಗೆ ಕಾರ್ಯಕ್ರಮ ರೂಪಿಸದೆ ಇದನ್ನು ಜಾರಿ ಮಾಡಿದಲ್ಲಿ ಈ ಭಾಗದಲ್ಲಿ ಜನತೆಯ ಬದುಕು ನರಕಮಯವಾಗಲಿದೆ.

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ರೈತ ವಿರೋಧಿ, ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿದ್ದಾರೆ. ಎಪಿಎಂಸಿ, ಲೇಬರ್ ಆ್ಯಕ್ಟ್ ಗೆ ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲೂ ಲೇಬರ್ ಆ್ಯಕ್ಟ್, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಕಾನೂನುಗಳಿಗೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. ಸರ್ಕಾರ, ಅಂಬಾನಿ, ಅದಾನಿಯ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದರು. ಈ ಹೋರಾಟವನ್ನು ಕೇವಲ ಕಾಪುವಿಗೆ ಸೀಮಿತಗೊಳಿಸದೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದರು.

ಪ್ರತಿಭಟನೆಯಲ್ಲಿ ನಾಯಕರುಗಳಾದ ನವೀನ್ ಚಂದ್ರ ಎಸ್ ಸುವರ್ಣ, ನವೀನ್ ಚಂದ್ರ ಶೆಟ್ಟಿ, ಸರಸು ಡಿ ಬಂಗೇರಾ, ಐಡಾ ಗಿಬ್ಬಾ ಡಿಸೋಜಾ, ಸುನೀಲ್ ಬಂಗೇರಾ, ಪ್ರಭಾಕರ ಆಚಾರ್ಯ, ಸಿ ಐಟಿಯು ನಾಯಕರಾದ ಮಹಾಬಲ ವಡೇರಹೋಬಳಿ, ಕವಿರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

ಬಿಜೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ : ಡಿಕೆ ಶಿ -Vishwanews24

 

Vishwa News 24

Recent Posts

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

8 seconds ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

13 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

23 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

34 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

60 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

1 hour ago